ತಹಶೀಲ್ದಾರ್ ಚಾಮರಾಜ ಪಾಟೀಲ ಮಾತನಾಡಿ, ‘ಮಳೆಗಾಲ ಮುಗಿಯುವವರೆಗೆ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ನದಿ ತಟ ಅಥವಾ ನದಿಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಿದ್ದೇವೆ. ಸಾಧ್ಯವಾದಷ್ಟು ಎತ್ತರದ ಪ್ರದೇಶಗಳಿಗೆ ತೆರಳಬೇಕು. ಹುಚ್ಚು ಸಾಹಸಕ್ಕೆ ಹೋಗುವುದರಿಂದ ಜೀವಕ್ಕೆ ಅಪಾಯ ತಂದುಕೊಳ್ಳುತ್ತೀರಿ’ ಎಂದು ಸಲಹೆ ಹೇಳಿದರು.