<p><strong>ರಾಯಚೂರು</strong>: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ತಾಲ್ಲೂಕಿನ ದಿನ್ನಿ ಮತ್ತು ನೆಲಹಾಳ ಗ್ರಾಮದಲ್ಲಿ ಆಶ್ರಯ ಯೋಜನೆಯಡಿ 48 ಕುಟುಂಬಗಳಿಗೆ ಪುನರ್ವಸತಿ ನಿವೇಶನ ಹಕ್ಕಪತ್ರಗಳನ್ನು ವಿತರಿಸಿದರು.</p>.<p>ನೆಲಹಾಳ ಗ್ರಾಮದಲ್ಲಿ ಎರಡು ಶಾಲಾ ಕೊಠಡಿಗಳ ಕಾಮಗಾರಿ, ಮುಖ್ಯರಸ್ತೆಗೆ ಹೊಂದಿಕೊಂಡು ಸಿಸಿ ರಸ್ತೆ ಕಾಮಗಾರಿ ಜೊತೆಗೆ ಜಲಧಾರೆ ಯೋಜನೆಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.</p>.<p>ನಂತರ ಮಾತನಾಡಿ, ‘ಸುಮಾರು ವರ್ಷಗಳಿಂದ ಗ್ರಾಮದ ನಿವಾಸಿಗಳು ನಿವೇಶನದ ಹಕ್ಕುಪತ್ರಗಳ ಬೇಡಿಕೆ ಇಟ್ಟಿದ್ದರು. ಗ್ರಾಮೀಣ ವಾಸಿಗಳ ಬೇಡಿಕೆ ನ್ಯಾಯಯುತವಾಗಿದೆ ಎಂದು ಗ್ರಾಮಸ್ಥರ ಆಶೋತ್ತರಕ್ಕೆ ಸ್ಪಂದಿಸಿ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಗಿಲ್ಲೇಸೂಗುರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಗ್ರಾಮದ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮನಿರ್ದೇಶಿತ ಸದಸ್ಯರು, ತಾಲ್ಲೂಕುಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ತಾಲ್ಲೂಕಿನ ದಿನ್ನಿ ಮತ್ತು ನೆಲಹಾಳ ಗ್ರಾಮದಲ್ಲಿ ಆಶ್ರಯ ಯೋಜನೆಯಡಿ 48 ಕುಟುಂಬಗಳಿಗೆ ಪುನರ್ವಸತಿ ನಿವೇಶನ ಹಕ್ಕಪತ್ರಗಳನ್ನು ವಿತರಿಸಿದರು.</p>.<p>ನೆಲಹಾಳ ಗ್ರಾಮದಲ್ಲಿ ಎರಡು ಶಾಲಾ ಕೊಠಡಿಗಳ ಕಾಮಗಾರಿ, ಮುಖ್ಯರಸ್ತೆಗೆ ಹೊಂದಿಕೊಂಡು ಸಿಸಿ ರಸ್ತೆ ಕಾಮಗಾರಿ ಜೊತೆಗೆ ಜಲಧಾರೆ ಯೋಜನೆಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.</p>.<p>ನಂತರ ಮಾತನಾಡಿ, ‘ಸುಮಾರು ವರ್ಷಗಳಿಂದ ಗ್ರಾಮದ ನಿವಾಸಿಗಳು ನಿವೇಶನದ ಹಕ್ಕುಪತ್ರಗಳ ಬೇಡಿಕೆ ಇಟ್ಟಿದ್ದರು. ಗ್ರಾಮೀಣ ವಾಸಿಗಳ ಬೇಡಿಕೆ ನ್ಯಾಯಯುತವಾಗಿದೆ ಎಂದು ಗ್ರಾಮಸ್ಥರ ಆಶೋತ್ತರಕ್ಕೆ ಸ್ಪಂದಿಸಿ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಗಿಲ್ಲೇಸೂಗುರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಗ್ರಾಮದ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮನಿರ್ದೇಶಿತ ಸದಸ್ಯರು, ತಾಲ್ಲೂಕುಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>