ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಲಪಲ್ಲಿ ಬಳಿ ಮತ್ತೊಂದು ಅಪಘಾತ: ಬಿಜೆಪಿ ಮುಖಂಡ ಅಪಾಯದಿಂದ ಪಾರು

Last Updated 5 ಫೆಬ್ರುವರಿ 2021, 10:35 IST
ಅಕ್ಷರ ಗಾತ್ರ

ಹಟ್ಟಿ ಚಿನ್ನದಗಣಿ: ಜಿಲ್ಲೆಯ ಅಪಘಾತ ವಲಯವಾಗಿರುವ ಲಿಂಗಸುಗೂರು ತಾಲ್ಲೂಕಿನ ಗೋಲಪಲ್ಲಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ ಘಟನೆ ಶುಕ್ರವಾರವೇ ನಡೆದಿದ್ದು, ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ ಅಮರನಾಥ ಪಾಟೀಲ ಅವರು ಅಪಾಯದಿಂದ ಪಾರಾಗಿದ್ದಾರೆ.

ಮಸ್ಕಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಕಲಬುರ್ಗಿಯಿಂದ ಸಂಚರಿಸುತ್ತಿದ್ದ ಅಮರನಾಥ ಪಾಟೀಲ ಅವರಿದ್ದ ಇನ್ನೊವಾ ಕಾರು, ಟಿಪ್ಪರ್‌ ಡಿಕ್ಕಿ ಆಗುವುದನ್ನು ತಪ್ಪಿಸುವಾಗ ಮೂರು ಸುತ್ತು ಮಗುಚಿದೆ.

ಅದೃಷ್ಟವಶಾತ್‌ ಯಾವುದೇ ಗಾಯಗಳಾಗಿಲ್ಲ. ಆನಂತರ ಬೇರೆ ಕಾರಿನಲ್ಲಿ ಅವರು ಸಂಚರಿಸಿ ಮಸ್ಕಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಹಟ್ಟಿ ಪೊಲೀಸ್‌ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಎರಡು ಲಾರಿಗಳ ಮಧ್ಯೆ ಕಾರೊಂದು ನಜ್ಜುಗುಜ್ಜಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕೂಡಾ ಶುಕ್ರವಾರ ಬೆಳಿಗ್ಗೆ ಅದೇ ಸ್ಥಳದಲ್ಲಿ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT