ಮುಖ್ಯವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನರು ವಾಸಿಸುವ ಬಡಾವಣೆಗಳಲ್ಲಿ ಚರಂಡಿಗಳಿಲ್ಲದ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದ್ದು, ಅಶುಚಿತ್ವದ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಭಣಿಸುತ್ತಿದೆ. ಮಕ್ಕಳು ಹಾಗೂ ವಯೋವೃದ್ಧರು ನಡೆದುಕೊಂಡು ಹೋಗುವುದಕ್ಕೆ ಸಾಧ್ಯವಾಗುತ್ತಿಲ್ಲ. ಮನೆಗಳಿಂದ ಹರಿದು ಬರುವ ಮಲೀನ ನೀರು ಸಂಗ್ರಹವಾಗುತ್ತಿದೆ. ಆರು ವರ್ಷಗಳ ಹಿಂದೆ ನಿರ್ಮಿಸಿರುವ ರಸ್ತೆಗಳು ಕಿತ್ತುಹೋಗಿವೆ.