<p><strong>ಲಿಂಗಸುಗೂರು:</strong> ಪಟ್ಟಣದ ಗೌಳಿಪುರ ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವ ಕಾರಣ ಸ್ಥಳಕ್ಕೆ ಶಾಸಕ ಮಾನಪ್ಪ ವಜ್ಜಲ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಕರಡಕಲ್ನಿಂದ ಗೌಳಿಪುರ ಮಾರ್ಗದವರೆಗೂ ₹1 ಕೋಟಿ ಅನುದಾನದಲ್ಲಿ ಡಾಂಬಾರು ರಸ್ತೆ ನಿರ್ಮಾಣಕ್ಕೆ ರಸ್ತೆ ಅಗೆದು ಆರು ತಿಂಗಳು ಕಳೆದಿದೆ. ಆದರೂ ಕೆಆರ್ಐಡಿಎಲ್ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ದೂಳಿನಿಂದ ತೊಂದರೆ ಅನುಭವಿಸುವಂತಾಗಿದೆ. ಡಾಂಬಾರು ರಸ್ತೆ ಬದಲು ಸಿಸಿ ರಸ್ತೆ ನಿರ್ಮಿಸಿ’ ಎಂದು ನಿವಾಸಿ ನಾಗರಾಜ ಮಸ್ಕಿ ಒತ್ತಾಯಿಸಿದರು.</p>.<p>‘ಕಾಮಗಾರಿ ಬದಲಾಯಿಸಿದರೆ ತಾಂತ್ರಿಕ ಸಮಸ್ಯೆಗಳು ಎದುರಾಗಲಿವೆ. ರಸ್ತೆ ಕಾಮಗಾರಿಗೆ ಬಂದ ಅನುದಾನ ಬಳಕೆ ಮಾಡದಿದ್ದರೆ, ವಾಪಸ್ ಹೋಗುತ್ತದೆ. ಹೀಗಾಗಿ ಡಾಂಬರು ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಬೇಕು’ ಎಂದು ಶಾಸಕರು ನಿವಾಸಿಗಳ ಮನವೊಲಿಸಿದರು.</p>.<p>‘ಕಾಮಗಾರಿ ವಿಳಂಬ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದು ಸರಿಯಲ್ಲ. ಕೂಡಲೇ ಕಾಮಗಾರಿ ಆರಂಭಿಸಿ ಬೇಗ ಮುಗಿಸಬೇಕು’ ಎಂದು ಕೆಆರ್ಐಡಿಎಲ್ ಅಧಿಕಾರಿಗೆ ತಾಕೀತು ಮಾಡಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಕೆ.ನಾಗಭೂಷಣ, ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಭೀಮಣ್ಣ ಹಿರೇಮನಿ, ವೆಂಕನಗೌಡ ಐದನಾಳ ಹಾಗೂ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ಪಟ್ಟಣದ ಗೌಳಿಪುರ ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವ ಕಾರಣ ಸ್ಥಳಕ್ಕೆ ಶಾಸಕ ಮಾನಪ್ಪ ವಜ್ಜಲ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಕರಡಕಲ್ನಿಂದ ಗೌಳಿಪುರ ಮಾರ್ಗದವರೆಗೂ ₹1 ಕೋಟಿ ಅನುದಾನದಲ್ಲಿ ಡಾಂಬಾರು ರಸ್ತೆ ನಿರ್ಮಾಣಕ್ಕೆ ರಸ್ತೆ ಅಗೆದು ಆರು ತಿಂಗಳು ಕಳೆದಿದೆ. ಆದರೂ ಕೆಆರ್ಐಡಿಎಲ್ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ದೂಳಿನಿಂದ ತೊಂದರೆ ಅನುಭವಿಸುವಂತಾಗಿದೆ. ಡಾಂಬಾರು ರಸ್ತೆ ಬದಲು ಸಿಸಿ ರಸ್ತೆ ನಿರ್ಮಿಸಿ’ ಎಂದು ನಿವಾಸಿ ನಾಗರಾಜ ಮಸ್ಕಿ ಒತ್ತಾಯಿಸಿದರು.</p>.<p>‘ಕಾಮಗಾರಿ ಬದಲಾಯಿಸಿದರೆ ತಾಂತ್ರಿಕ ಸಮಸ್ಯೆಗಳು ಎದುರಾಗಲಿವೆ. ರಸ್ತೆ ಕಾಮಗಾರಿಗೆ ಬಂದ ಅನುದಾನ ಬಳಕೆ ಮಾಡದಿದ್ದರೆ, ವಾಪಸ್ ಹೋಗುತ್ತದೆ. ಹೀಗಾಗಿ ಡಾಂಬರು ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಬೇಕು’ ಎಂದು ಶಾಸಕರು ನಿವಾಸಿಗಳ ಮನವೊಲಿಸಿದರು.</p>.<p>‘ಕಾಮಗಾರಿ ವಿಳಂಬ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದು ಸರಿಯಲ್ಲ. ಕೂಡಲೇ ಕಾಮಗಾರಿ ಆರಂಭಿಸಿ ಬೇಗ ಮುಗಿಸಬೇಕು’ ಎಂದು ಕೆಆರ್ಐಡಿಎಲ್ ಅಧಿಕಾರಿಗೆ ತಾಕೀತು ಮಾಡಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಕೆ.ನಾಗಭೂಷಣ, ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಭೀಮಣ್ಣ ಹಿರೇಮನಿ, ವೆಂಕನಗೌಡ ಐದನಾಳ ಹಾಗೂ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>