ಲಿಂಗಸುಗೂರು: ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ವೈಜ್ಞಾನಿಕವಾಗಿ ರಸ್ತೆ ಹಾಗೂ ಚರಂಡಿ ನಿರ್ಮಿಸದ ಕಾರಣ ಕೊಳಚೆ ನೀರು ರಸ್ತೆಗುಂಟ ಹರಿದು ಅಲ್ಲಲ್ಲಿ ಸಂಗ್ರಹವಾಗಿ ಕೊಳಚೆ ಪ್ರದೇಶವಾಗಿ ಮಾರ್ಪಟ್ಟಿದೆ.
ಹಲವು ವರ್ಷಗಳಿಂದ ಗ್ರಾಮಸ್ಥರು ಘನತ್ಯಾಜ್ಯ ವಿಲೇವಾರಿ, ವಾರ್ಡ್ಗಳಲ್ಲಿನ ಕೊಳಚೆ ನಿರ್ಮೂಲನೆಗೆ ಮನವಿ ಸಲ್ಲಿಸುತ್ತ ಬಂದಿದ್ದರೂ ನ್ಯಾಯ ದೊರೆತಿಲ್ಲ. ಪ್ರಮುಖರು, ಸದಸ್ಯರು, ಅಧಿಕಾರಿಗಳು ವಿವಿಧ ಯೋಜನೆಗಳಡಿ ಕಾಗದದಲ್ಲಿ ಅಭಿವೃದ್ಧಿ ತೋರಿಸಿ ಹಣ ದುರ್ಬಳಕೆ ಮಾಡಿಕೊಂಡಿರುವುದು ಸಾಧನೆಯಾಗಿದೆ. ಕಾರಣ ಜಿಲ್ಲಾಧಿಕಾರಿ ಹೊನ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಗತಿ ಅಧ್ಯಯನ ಮಾಡಿ ಸ್ವಚ್ಛ ಗ್ರಾಮ ಯೋಜನೆಯಡಿ ಸುಂದರ ಗ್ರಾಮವನ್ನಾಗಿಸಬೇಕು. ಕೊಳಚೆ ನಿರ್ಮೂಲನೆಗೊಳಿಸಿ ಜನರಿಗೆ ಆರೋಗ್ಯಯುತ ಬದುಕು ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡಬೇಕು.