<p><strong>ಮುದಗಲ್:</strong> ಸಮೀಪದ ನಾಗಲಾಪುರು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್, ಬೀರಲಿಂಗೇಶ್ವರ ದೇವಸ್ಥಾನ ಹಾಗೂ ಖಾಸಗಿ ವ್ಯಕ್ತಿಗಳ ಹೊಲಕ್ಕೆ ಹೋಗುವ ರಸ್ತೆಯನ್ನು ವ್ಯಕ್ತಿ ಒಬ್ಬ ಬಂದ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.</p>.<p>ನಾಗಲಾಪುರು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ಗೆ ಹೋಗಲು ಇದ್ದ ರಸ್ತೆಯನ್ನು ಆರು ತಿಂಗಳಿಂದ ವ್ಯಕ್ತಿಯೊಬ್ಬರು ತಡೆ ಗೋಡೆ ಕಟ್ಟಿ ಬಂದ್ ಮಾಡಿದ್ದರು. ಹೊಲಗಳಿಗೆ, ಕುಡಿಯುವ ನೀರಿನ ಟ್ಯಾಂಕ್, ದೇವಸ್ಥಾನಕ್ಕೆ ಹೋಗಲು ತೊಂದರೆಯಾಗಿತ್ತು. ಈ ಬಗ್ಗೆ ಗ್ರಾಮಸ್ಥರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ದೂರು ನೀಡಿದ್ದರು.</p>.<p>ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಅಧಿಕಾರಿಗಳ ತಂಡ ಭೇಟಿ ನೀಡಿ ಸಾರ್ವಜನಿಕರ ಜತೆ ಮಾತುಕತೆ ನಡೆಸಿ ಎರಡು ಕಡೆ ಸಂಧಾನ ಮಾಡಲು ಪ್ರಯತ್ನಿಸಿದರು. ಪಟ್ಟಣದ ಪ್ರವಾಸಿ ಮಂದಿರಕ್ಕೆ ಜಮೀನಿನ ಮಾಲೀಕರನ್ನು ಕರೆಸಿ ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಿದರು.</p>.<p>ಲಿಂಗಸುಗೂರು ತಹಶೀಲ್ದಾರ್ ಡಾ. ಮಲ್ಲಪ್ಪ, ಲಿಂಗಸುಗೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ, ಉಪ ತಹಶೀಲ್ದಾರ್ ತುಳಜಾರಾಮ ಸಿಂಗ್, ಪಿಎಸ್ಐ ಸದ್ದಾಂ ಹುಸೇನ್, ಗ್ರಾಮಲೆಕ್ಕಾಧಿಕಾರಿ ಮಾಬೂಸಾಬ ಹಲ್ಕಾವಟಗಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿಬಾಯಿ ಸೇರಿದಂತೆ ನಾಗಲಾಪುರು ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದಗಲ್:</strong> ಸಮೀಪದ ನಾಗಲಾಪುರು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್, ಬೀರಲಿಂಗೇಶ್ವರ ದೇವಸ್ಥಾನ ಹಾಗೂ ಖಾಸಗಿ ವ್ಯಕ್ತಿಗಳ ಹೊಲಕ್ಕೆ ಹೋಗುವ ರಸ್ತೆಯನ್ನು ವ್ಯಕ್ತಿ ಒಬ್ಬ ಬಂದ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.</p>.<p>ನಾಗಲಾಪುರು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ಗೆ ಹೋಗಲು ಇದ್ದ ರಸ್ತೆಯನ್ನು ಆರು ತಿಂಗಳಿಂದ ವ್ಯಕ್ತಿಯೊಬ್ಬರು ತಡೆ ಗೋಡೆ ಕಟ್ಟಿ ಬಂದ್ ಮಾಡಿದ್ದರು. ಹೊಲಗಳಿಗೆ, ಕುಡಿಯುವ ನೀರಿನ ಟ್ಯಾಂಕ್, ದೇವಸ್ಥಾನಕ್ಕೆ ಹೋಗಲು ತೊಂದರೆಯಾಗಿತ್ತು. ಈ ಬಗ್ಗೆ ಗ್ರಾಮಸ್ಥರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ದೂರು ನೀಡಿದ್ದರು.</p>.<p>ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಅಧಿಕಾರಿಗಳ ತಂಡ ಭೇಟಿ ನೀಡಿ ಸಾರ್ವಜನಿಕರ ಜತೆ ಮಾತುಕತೆ ನಡೆಸಿ ಎರಡು ಕಡೆ ಸಂಧಾನ ಮಾಡಲು ಪ್ರಯತ್ನಿಸಿದರು. ಪಟ್ಟಣದ ಪ್ರವಾಸಿ ಮಂದಿರಕ್ಕೆ ಜಮೀನಿನ ಮಾಲೀಕರನ್ನು ಕರೆಸಿ ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಿದರು.</p>.<p>ಲಿಂಗಸುಗೂರು ತಹಶೀಲ್ದಾರ್ ಡಾ. ಮಲ್ಲಪ್ಪ, ಲಿಂಗಸುಗೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ, ಉಪ ತಹಶೀಲ್ದಾರ್ ತುಳಜಾರಾಮ ಸಿಂಗ್, ಪಿಎಸ್ಐ ಸದ್ದಾಂ ಹುಸೇನ್, ಗ್ರಾಮಲೆಕ್ಕಾಧಿಕಾರಿ ಮಾಬೂಸಾಬ ಹಲ್ಕಾವಟಗಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿಬಾಯಿ ಸೇರಿದಂತೆ ನಾಗಲಾಪುರು ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>