ಎರಡೂವರೆ ದಶಕಗಳ ಹಿಂದೆ ಸರ್ಕಾರದ ವತಿಯಿಂದ ಬಡಾವಣೆ ನಿರ್ಮಾಣಗೊಂಡಿದೆ. ಅತ್ಯಂತ ಹಿಂದುಳಿದ, ನಿರ್ಗತಿಕ ಕುಟುಂಬಸ್ಥರಿಗೆ ನಿವೇಶ ಹಂಚಿಕೆ ಮಾಡಿ ಮನೆಗಳ ನಿರ್ಮಾಣ ಮಾಡಿಕೊಡಲಾಗಿತ್ತು. ಅಂದಿನಿಂದ ಇಂದಿನವರೆಗೆ ರಸ್ತೆ, ಚರಂಡಿ, ಶುದ್ಧ ಕುಡಿವ ನೀರು ಸೇರಿದಂತೆ ಯಾವೊಂದು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು
ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮುಂದಾಗದೆ ಹೋಗಿರುವುದು ಅಭಿವೃದ್ಧಿ ಹರಿಕಾರರ ಪಾಲಿಗೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ.