<p><strong>ಶಕ್ತಿನಗರ</strong>: ರಾಯಚೂರು ತಾಲ್ಲೂಕಿನ ಮರ್ಚೆಟಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರ್ಚೆಟಹಾಳ ಗ್ರಾಮದಿಂದ ಉಡುಮಗಲ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಹದಗೆಟ್ಟಿದ್ದು, ಸಾರ್ವಜನಿಕರು ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಎರಡು ವರ್ಷಗಳ ಹಿಂದೆ ರಸ್ತೆ ನಿರ್ಮಾಣಕ್ಕೆ ಜಲ್ಲಿಕಲ್ಲು ಹಾಕಿ ಹಾಗೆ ಬಿಟ್ಟ ಕಾರಣ ಶಾಲಾ ಮಕ್ಕಳು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಎರಡು ವರ್ಷಗಳ ಹಿಂದೆ ಗ್ರಾಮದ ತಿಮ್ಮಪ್ಪ ತಾತನವರ ಮಠದಿಂದ ತಿಮ್ಮಪ್ಪ ಸಾಹುಕಾರರ ಹೊಲದವರೆಗೆ ಸುಮಾರು ಎರಡು ಕಿ.ಮೀವರೆಗಿನ ಮುಖ್ಯರಸ್ತೆಗೆ ಜಲ್ಲಿಕಲ್ಲು ಹಾಕಿ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದೆ.</p>.<p>ಕಾರಣಾಂತರಗಳಿಂದ ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ಜಲ್ಲಿಕಲ್ಲುಗಳಲ್ಲಿ ವಾಹನಗಳು ತೆರಳಿದಾಗ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಶಾಲೆಯ ಮಕ್ಕಳಿಗೆ, ಜಮೀನಿಗೆ ತೆರಳುವ ಸಾರ್ವಜನಿಕರಿಗೆ ಕಲ್ಲು ಹೊಡೆದು ಅಪಘಾತಗಳು ಸಂಭವಿಸಿವೆ.</p>.<p>ಗ್ರಾಮದಿಂದ 500 ಮೀಟರ್ ದೂರದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಪ್ರತಿದಿನ ನೂರಾರು ಮಕ್ಕಳು ಈ ರಸ್ತೆ ಮೂಲಕ ತೆರಳುತ್ತಾರೆ. ಹತ್ತಿ ಬಿಡಿಸುವ ಕಾಲ ಇದಾಗಿರುವುದರಿಂದ ನಿತ್ಯ ನೂರಾರು ಆಂಧ್ರಪ್ರದೇಶ ಮತ್ತು ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಕೂಲಿ ಕಾರ್ಮಿಕರನ್ನು ಹೊತ್ತು ಟ್ರ್ಯಾಕ್ಟರ್, ಟಾಟಾ ಏಸ್ ವಾಹನಗಳು ಇದೇ ರಸ್ತೆಯಲ್ಲಿ ಸಂಚಾರ ಮಾಡುತ್ತವೆ.</p>.<p>ಮುಖ್ಯರಸ್ತೆ ಹಾಳಾಗಿರುವ ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಶಾಸಕ ಬಸನಗೌಡ ದದ್ದಲ್ ಅವರಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ ಎಂದು ಗ್ರಾಮದ ಭೀಮರಾಯ ನಾಯಕ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ</strong>: ರಾಯಚೂರು ತಾಲ್ಲೂಕಿನ ಮರ್ಚೆಟಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರ್ಚೆಟಹಾಳ ಗ್ರಾಮದಿಂದ ಉಡುಮಗಲ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಹದಗೆಟ್ಟಿದ್ದು, ಸಾರ್ವಜನಿಕರು ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಎರಡು ವರ್ಷಗಳ ಹಿಂದೆ ರಸ್ತೆ ನಿರ್ಮಾಣಕ್ಕೆ ಜಲ್ಲಿಕಲ್ಲು ಹಾಕಿ ಹಾಗೆ ಬಿಟ್ಟ ಕಾರಣ ಶಾಲಾ ಮಕ್ಕಳು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಎರಡು ವರ್ಷಗಳ ಹಿಂದೆ ಗ್ರಾಮದ ತಿಮ್ಮಪ್ಪ ತಾತನವರ ಮಠದಿಂದ ತಿಮ್ಮಪ್ಪ ಸಾಹುಕಾರರ ಹೊಲದವರೆಗೆ ಸುಮಾರು ಎರಡು ಕಿ.ಮೀವರೆಗಿನ ಮುಖ್ಯರಸ್ತೆಗೆ ಜಲ್ಲಿಕಲ್ಲು ಹಾಕಿ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದೆ.</p>.<p>ಕಾರಣಾಂತರಗಳಿಂದ ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ಜಲ್ಲಿಕಲ್ಲುಗಳಲ್ಲಿ ವಾಹನಗಳು ತೆರಳಿದಾಗ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಶಾಲೆಯ ಮಕ್ಕಳಿಗೆ, ಜಮೀನಿಗೆ ತೆರಳುವ ಸಾರ್ವಜನಿಕರಿಗೆ ಕಲ್ಲು ಹೊಡೆದು ಅಪಘಾತಗಳು ಸಂಭವಿಸಿವೆ.</p>.<p>ಗ್ರಾಮದಿಂದ 500 ಮೀಟರ್ ದೂರದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಪ್ರತಿದಿನ ನೂರಾರು ಮಕ್ಕಳು ಈ ರಸ್ತೆ ಮೂಲಕ ತೆರಳುತ್ತಾರೆ. ಹತ್ತಿ ಬಿಡಿಸುವ ಕಾಲ ಇದಾಗಿರುವುದರಿಂದ ನಿತ್ಯ ನೂರಾರು ಆಂಧ್ರಪ್ರದೇಶ ಮತ್ತು ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಕೂಲಿ ಕಾರ್ಮಿಕರನ್ನು ಹೊತ್ತು ಟ್ರ್ಯಾಕ್ಟರ್, ಟಾಟಾ ಏಸ್ ವಾಹನಗಳು ಇದೇ ರಸ್ತೆಯಲ್ಲಿ ಸಂಚಾರ ಮಾಡುತ್ತವೆ.</p>.<p>ಮುಖ್ಯರಸ್ತೆ ಹಾಳಾಗಿರುವ ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಶಾಸಕ ಬಸನಗೌಡ ದದ್ದಲ್ ಅವರಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ ಎಂದು ಗ್ರಾಮದ ಭೀಮರಾಯ ನಾಯಕ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>