ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ನೀರಾವರಿಯಿಂದ ವಂಚಿತವಾದ ಈ ಪ್ರದೇಶವನ್ನು ನೀರಾವರಿಯನ್ನಾಗಿ ಮಾಡಬೇಕು ಎಂದು ಕಳೆದ ಬಾರಿ ಶಾಸಕರಾದ ಸಂದರ್ಭದಿಂದ ಇಲ್ಲಿಯವರೆಗೂ ಕ್ಷೇತ್ರದ ಕೆರೆ ತುಂಬುವ ಯೋಜನೆಗಳು, ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಗಳಿಗೆ ಸಾಕಷ್ಟು ಪ್ರಯತ್ನಿಸಲಾಗಿದೆ. ಇಂಥ ಅನೇಕ ಯೋಜನೆಗಳು ಕ್ಷೇತ್ರಕ್ಕೆ ಮಂಜೂರು ಮಾಡಿಸಿ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.