<p><strong>ಸಿಂಧನೂರು:</strong> 2023-24ನೇ ಸಾಲಿನ ಕೆಕೆಆರ್ಡಿಬಿ ಮೈಕ್ರೋ ಅಕ್ಷರ ಆವಿಷ್ಕಾರ ಅನುದಾನದಡಿ ₹ 199.73 ಲಕ್ಷ ವೆಚ್ಚದಲ್ಲಿ ತಾಲ್ಲೂಕಿನ ಸೋಮಲಾಪುರ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲಾ ಕಟ್ಟಡ ಹಾಗೂ ಸ್ಮಾರ್ಟ್ ಕ್ಲಾಸ್ ನಿರ್ಮಾಣ, ₹1 ಕೋಟಿ ವೆಚ್ಚದಲ್ಲಿ ಬೂದಿವಾಳ ಗ್ರಾಮದಲ್ಲಿ ಹಾಗೂ ₹1 ಕೋಟಿ ವೆಚ್ಚದಲ್ಲಿ ಮಾಡಶಿರವಾರ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಹಂಪನಗೌಡ ಬಾದರ್ಲಿ ಗುರುವಾರ ಭೂಮಿಪೂಜೆ ನೆರವೇರಿಸಿದರು.</p>.<p>ಮಾಡಶಿರವಾರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಕೆಆರ್ಡಿಬಿ ದಶಮಾನೋತ್ಸವ ಪ್ರಯುಕ್ತ ಎರಡು ವರ್ಷಗಳಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ಮೈಕ್ರೋ ಯೋಜನೆಯಡಿ ₹ 53 ಕೋಟಿ ಖರ್ಚು ಮಾಡಲಾಗಿದೆ. ಸೆ.17ರಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಂಧನೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ತುರ್ವಿಹಾಳ ಬಳಿ 2ನೇ ಹಂತದ ಕೆರೆ ನಿರ್ಮಾಣಕ್ಕೆ ₹ 30 ಕೋಟಿ ಮಂಜೂರಿಗೆ ಅನುಮೋದನೆ ದೊರೆತಿದೆ’ ಎಂದರು.</p>.<p>ಜವಳಗೇರಾ ಗ್ರಾಮದಲ್ಲಿ ಆರೋಗ್ಯ ಸಮುದಾಯ ಭವನ, 2 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಂಜೂರಿಗೂ ಅನುಮತಿ ದೊರೆತಿದೆ. ಐಎಎಸ್, ಐಪಿಎಸ್, ಕೆಎಎಸ್ ಸ್ಪರ್ಧಾಕಾಂಕ್ಷಿಗಳಿಗೆ ಅಧ್ಯಯನ ಕೇಂದ್ರ ಹಾಗೂ ಡಿಜಿಟಲ್ ಗ್ರಂಥಾಲಯಕ್ಕಾಗಿ ₹ 1 ಕೋಟಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸಿಂಧನೂರು ದಸರಾ ಉತ್ಸವ ನಿಮಿತ್ತ ನಗರದ ಸುಂದರೀಕರಣ ಹಾಗೂ ದೀಪಾಲಂಕಾರಕ್ಕಾಗಿ ₹ 2.5 ಕೋಟಿ ಅನುದಾನ ಬಿಡುಗಡೆಗೆ ಸರ್ಕಾರ ಆದೇಶಿಸಿದೆ’ ಎಂದು ತಿಳಿಸಿದರು.</p>.<p>ಪಂಚಾಯತ್ರಾಜ್ ಎಂಜನಿಯರಿಂಗ್ ಉಪವಿಭಾಗದ ಎಇಇ ಶಿವಪ್ಪ, ಮುಖಂಡರಾದ ಸಿದ್ರಾಮಪ್ಪ ಮಾಡಶಿರವಾರ, ಖಾಜಿಮಲಿಕ್ ವಕೀಲ, ಅಶೋಕ ಉಮಲೂಟಿ, ಮೌಲಪ್ಪ ಮಾಡಶಿರವಾರ ಸೇರಿದಂತೆ ಪಿಡಿಒಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> 2023-24ನೇ ಸಾಲಿನ ಕೆಕೆಆರ್ಡಿಬಿ ಮೈಕ್ರೋ ಅಕ್ಷರ ಆವಿಷ್ಕಾರ ಅನುದಾನದಡಿ ₹ 199.73 ಲಕ್ಷ ವೆಚ್ಚದಲ್ಲಿ ತಾಲ್ಲೂಕಿನ ಸೋಮಲಾಪುರ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲಾ ಕಟ್ಟಡ ಹಾಗೂ ಸ್ಮಾರ್ಟ್ ಕ್ಲಾಸ್ ನಿರ್ಮಾಣ, ₹1 ಕೋಟಿ ವೆಚ್ಚದಲ್ಲಿ ಬೂದಿವಾಳ ಗ್ರಾಮದಲ್ಲಿ ಹಾಗೂ ₹1 ಕೋಟಿ ವೆಚ್ಚದಲ್ಲಿ ಮಾಡಶಿರವಾರ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಹಂಪನಗೌಡ ಬಾದರ್ಲಿ ಗುರುವಾರ ಭೂಮಿಪೂಜೆ ನೆರವೇರಿಸಿದರು.</p>.<p>ಮಾಡಶಿರವಾರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಕೆಆರ್ಡಿಬಿ ದಶಮಾನೋತ್ಸವ ಪ್ರಯುಕ್ತ ಎರಡು ವರ್ಷಗಳಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ಮೈಕ್ರೋ ಯೋಜನೆಯಡಿ ₹ 53 ಕೋಟಿ ಖರ್ಚು ಮಾಡಲಾಗಿದೆ. ಸೆ.17ರಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಂಧನೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ತುರ್ವಿಹಾಳ ಬಳಿ 2ನೇ ಹಂತದ ಕೆರೆ ನಿರ್ಮಾಣಕ್ಕೆ ₹ 30 ಕೋಟಿ ಮಂಜೂರಿಗೆ ಅನುಮೋದನೆ ದೊರೆತಿದೆ’ ಎಂದರು.</p>.<p>ಜವಳಗೇರಾ ಗ್ರಾಮದಲ್ಲಿ ಆರೋಗ್ಯ ಸಮುದಾಯ ಭವನ, 2 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಂಜೂರಿಗೂ ಅನುಮತಿ ದೊರೆತಿದೆ. ಐಎಎಸ್, ಐಪಿಎಸ್, ಕೆಎಎಸ್ ಸ್ಪರ್ಧಾಕಾಂಕ್ಷಿಗಳಿಗೆ ಅಧ್ಯಯನ ಕೇಂದ್ರ ಹಾಗೂ ಡಿಜಿಟಲ್ ಗ್ರಂಥಾಲಯಕ್ಕಾಗಿ ₹ 1 ಕೋಟಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸಿಂಧನೂರು ದಸರಾ ಉತ್ಸವ ನಿಮಿತ್ತ ನಗರದ ಸುಂದರೀಕರಣ ಹಾಗೂ ದೀಪಾಲಂಕಾರಕ್ಕಾಗಿ ₹ 2.5 ಕೋಟಿ ಅನುದಾನ ಬಿಡುಗಡೆಗೆ ಸರ್ಕಾರ ಆದೇಶಿಸಿದೆ’ ಎಂದು ತಿಳಿಸಿದರು.</p>.<p>ಪಂಚಾಯತ್ರಾಜ್ ಎಂಜನಿಯರಿಂಗ್ ಉಪವಿಭಾಗದ ಎಇಇ ಶಿವಪ್ಪ, ಮುಖಂಡರಾದ ಸಿದ್ರಾಮಪ್ಪ ಮಾಡಶಿರವಾರ, ಖಾಜಿಮಲಿಕ್ ವಕೀಲ, ಅಶೋಕ ಉಮಲೂಟಿ, ಮೌಲಪ್ಪ ಮಾಡಶಿರವಾರ ಸೇರಿದಂತೆ ಪಿಡಿಒಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>