<p>ಶಕ್ತಿನಗರ: ರಾಜ್ಯದಲ್ಲಿ ಜಲವಿದ್ಯುತ್ ಮೂಲಗಳಿಂದ ಗರಿಷ್ಠ ಪ್ರಮಾಣದ ವಿದ್ಯುತ್ ಉತ್ಪಾದನೆ ಆಗುತ್ತಿರುವುದರಿಂಧ ಶಾಖೋತ್ಪನ್ನ ವಿದ್ಯುತ್ಗೆ ಬೇಡಿಕೆ ಇಲ್ಲದೆ, ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್ಟಿಪಿಎಸ್)ದ ಇದೇ ಮೊದಲ ಸಲ ಎಲ್ಲ ಎಂಟು ಘಟಕಗಳನ್ನು ಭಾನುವಾರದಿಂದ ಸ್ಥಗಿತಗೊಳಿಸಲಾಗಿದೆ.</p>.<p>‘ಪ್ರತಿವರ್ಷ ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆಗೆ ಆರ್ಟಿಪಿಎಸ್ ಆಧಾರಸ್ತಂಭವಾಗಿರುತ್ತಿತ್ತು. ಈ ವರ್ಷ ಲಾಕ್ಡೌನ್ ಇದ್ದುದರಿಂದ ಅಧಿಕ ಪ್ರಮಾಣದಲ್ಲಿ ವಾಣಿಜ್ಯ ಚಟುವಟಿಕೆ ಆರಂಭವಾಗಲಿಲ್ಲ. ಈಗ ಎಲ್ಲೆಡೆಯೂ ಮಳೆ ಆಗುತ್ತಿದೆ. ಪವನ ಮತ್ತು ಸೌರಶಕ್ತಿ ವಿದ್ಯುತ್ ಉತ್ಪಾದನೆಯೂ ಇದೆ. ವಿದ್ಯುತ್ ಬೇಡಿಕೆಗಿಂತ ಲಭ್ಯತೆ ಹೆಚ್ಚಿದೆ. ಈ ಎಲ್ಲ ಕಾರಣಗಳಿಂದ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಆರ್ಟಿಪಿಎಸ್ ಪ್ರಭಾರ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟಚಲಾಪತಿ ಹೇಳಿದರು.</p>.<p>‘ಪ್ರತಿನಿತ್ಯ 25 ಸಾವಿರ ಟನ್ ಕಲ್ಲಿದ್ದಲು ಬಳಕೆಯಾಗುತ್ತಿತ್ತು. ಸದ್ಯಕ್ಕೆ ಆರ್ಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆ ಆರಂಭ ಆಗುವವರೆಗೂ, ಕಲ್ಲಿದ್ದಲು ಪೂರೈಸುವುದನ್ನು ಸ್ಥಗಿತ ಮಾಡುವಂತೆ ಕಲ್ಲಿದ್ದಲು ಗಣಿ ಕಂಪನಿಯ ಮಾಲೀಕರಿಗೆ ತಿಳಿಸಲಾಗಿದೆ’ ಎಂದು ಕಲ್ಲಿದ್ದಲು ವಿಭಾಗದ ಮುಖ್ಯ ಎಂಜಿನಿಯರ್ ಸುರೇಶಬಾಬು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಕ್ತಿನಗರ: ರಾಜ್ಯದಲ್ಲಿ ಜಲವಿದ್ಯುತ್ ಮೂಲಗಳಿಂದ ಗರಿಷ್ಠ ಪ್ರಮಾಣದ ವಿದ್ಯುತ್ ಉತ್ಪಾದನೆ ಆಗುತ್ತಿರುವುದರಿಂಧ ಶಾಖೋತ್ಪನ್ನ ವಿದ್ಯುತ್ಗೆ ಬೇಡಿಕೆ ಇಲ್ಲದೆ, ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್ಟಿಪಿಎಸ್)ದ ಇದೇ ಮೊದಲ ಸಲ ಎಲ್ಲ ಎಂಟು ಘಟಕಗಳನ್ನು ಭಾನುವಾರದಿಂದ ಸ್ಥಗಿತಗೊಳಿಸಲಾಗಿದೆ.</p>.<p>‘ಪ್ರತಿವರ್ಷ ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆಗೆ ಆರ್ಟಿಪಿಎಸ್ ಆಧಾರಸ್ತಂಭವಾಗಿರುತ್ತಿತ್ತು. ಈ ವರ್ಷ ಲಾಕ್ಡೌನ್ ಇದ್ದುದರಿಂದ ಅಧಿಕ ಪ್ರಮಾಣದಲ್ಲಿ ವಾಣಿಜ್ಯ ಚಟುವಟಿಕೆ ಆರಂಭವಾಗಲಿಲ್ಲ. ಈಗ ಎಲ್ಲೆಡೆಯೂ ಮಳೆ ಆಗುತ್ತಿದೆ. ಪವನ ಮತ್ತು ಸೌರಶಕ್ತಿ ವಿದ್ಯುತ್ ಉತ್ಪಾದನೆಯೂ ಇದೆ. ವಿದ್ಯುತ್ ಬೇಡಿಕೆಗಿಂತ ಲಭ್ಯತೆ ಹೆಚ್ಚಿದೆ. ಈ ಎಲ್ಲ ಕಾರಣಗಳಿಂದ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಆರ್ಟಿಪಿಎಸ್ ಪ್ರಭಾರ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟಚಲಾಪತಿ ಹೇಳಿದರು.</p>.<p>‘ಪ್ರತಿನಿತ್ಯ 25 ಸಾವಿರ ಟನ್ ಕಲ್ಲಿದ್ದಲು ಬಳಕೆಯಾಗುತ್ತಿತ್ತು. ಸದ್ಯಕ್ಕೆ ಆರ್ಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆ ಆರಂಭ ಆಗುವವರೆಗೂ, ಕಲ್ಲಿದ್ದಲು ಪೂರೈಸುವುದನ್ನು ಸ್ಥಗಿತ ಮಾಡುವಂತೆ ಕಲ್ಲಿದ್ದಲು ಗಣಿ ಕಂಪನಿಯ ಮಾಲೀಕರಿಗೆ ತಿಳಿಸಲಾಗಿದೆ’ ಎಂದು ಕಲ್ಲಿದ್ದಲು ವಿಭಾಗದ ಮುಖ್ಯ ಎಂಜಿನಿಯರ್ ಸುರೇಶಬಾಬು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>