ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶ್ವಿನಿ ‘ಕಳೆದ ವರ್ಷ ಜುಲೈನಲ್ಲಿ ನಿಯಮಾವಳಿಗಳ ಪ್ರಕಾರ ಚುನಾವಣೆ ನಡೆಸಲು ಸಿದ್ಧತೆ ನಡೆದಿದ್ದಾಗ ಸಂಸ್ಥೆಯೊಂದಿಗೆ ನೇರ ಸಂಬಂಧ ಇಲ್ಲದ ವ್ಯಕ್ತಿಯೊಬ್ಬರು ಅದಕ್ಕೆ ಅಡ್ಡಿಪಡಿಸಿದರು. ನಂತರ ಕಾನೂನು ಹೋರಾಟ ನಡೆಸಲಾಯಿತು. ಚುನಾವಣೆ ನಡೆಸಲು ನ್ಯಾಯಾಲಯ ಸೂಚಿಸಿತು. ಆದರೆ ಈಗ ಸಂಸ್ಥೆಯ ಉಪಾಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ನಿಯಮಗಳನ್ನು ಗಾಳಿಗೆ ತೂರಿ ಚುನಾವಣೆಗೆ ಆದೇಶ ಹೊರಡಿಸಿದ್ದಾರೆ. ಈ ಚುನಾವಣೆ ನಡೆಯಲು ಬಿಡುವುದಿಲ್ಲ’ ಎಂದರು.