<p><strong>ಸಿರವಾರ:</strong> ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಕೆಸರು ಗದ್ದೆಗಳಾಗಿ ಮಾರ್ಪಟ್ಟಿವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿಡಿದುಕೊಂಡು ಪ್ರಯಾಣಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.</p>.<p>ಪಟ್ಟಣದಿಂದ ಮರಾಟ, ಮುರ್ಕಿಗುಡ್ಡ ಸೇರಿದಂತೆ ಹಳ್ಳಿ ಮತ್ತು ತಾಂಡಾಗಳ ರಸ್ತೆಗಳಲ್ಲಿ ನೀರು ನಿಂತುಕೊಂಡ ಕಾರಣ ಅದನ್ನು ದಾಟಲು ಪರದಾಡಬೇಕಾದ ಸ್ಥಿತಿ ಇದೆ.</p>.<p>ಶಾಲೆಗಳು ಆರಂಭವಾಗಿರುವುದರಿಂದ ಪಟ್ಟಣದ ಶಾಲಾ–ಕಾಲೇಜುಗಳಿಗೆ ವಿದ್ಯಾರ್ಥಿಗಳು ನಡೆದುಕೊಂಡು, ದ್ವಿಚಕ್ರ ವಾಹನ ಅಥವಾ ಆಟೊಗಳಲ್ಲಿ ಬರಬೇಕಾದ ಅನಿವಾರ್ಯತೆ ಎದುರಾಗಿದೆ.</p>.<p>‘ಮಳೆಗಾಲ ಬಂತೆಂದರೆ ಸಾಕು ಪ್ರತಿವರ್ಷ ರಸ್ತೆಗಳ ಸ್ಥಿತಿ ಇದೇ ರೀತಿಯಾಗಿರುತ್ತದೆ. ಮಳೆಗಾಲ ಮುಗಿಯುವುದರೊಳಗೆ ಅಲ್ಪಸ್ವಲ್ಪ ಮರಂ, ಕಂಕರ್ ಹಾಕಿ ರಸ್ತೆ ದುರಸ್ತಿ ನೆಪದಲ್ಲಿ ಹಣ ಲೂಟಿ ಮಾಡಲಾಗುತ್ತದೆ. ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದಿಲ್ಲ’ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.</p>.<p>ಸಾಂಕ್ರಾಮಿಕ ರೋಗ ಭೀತಿ: ರಸ್ತೆಯಲ್ಲಿ ಮಳೆ ನೀರು ಸಂಗ್ರಹವಾಗುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ.</p>.<p>ರಸ್ತೆ ಪಕ್ಕದಲ್ಲಿ ಬೇಲಿ: ರಸ್ತೆ ಪಕ್ಕದಲ್ಲಿ ಜಾಲಿ ಗಿಡಗಳು ಬೆಳೆದು ರಸ್ತೆಗೆ ಬೇಲಿ ಹಾಕಿದಂತಾಗಿದೆ. ರಸ್ತೆಯಲ್ಲಿ ನೀರು, ಪಕ್ಕದಲ್ಲಿ ಜಾಲಿ ಗಿಡಗಳಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ.</p>.<p>‘ಅಧಿಕಾರಿಗಳ ನಿರ್ಲಕ್ಷ್ಯ’: ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹೆಚ್ಚು ಎಂದರೆ ತಾಲ್ಲೂಕು ಕೇಂದ್ರಗಳಿಗೆ ಬಂದು ಹೋಗುತ್ತಾರೆ. ಗ್ರಾಮೀಣ ಪ್ರದೇಶಗಳ ಕಡೆ ಬಂದರೆ ಮಾತ್ರ ಇಲ್ಲಿನ ರಸ್ತೆಗಳ ಪರಿಸ್ಥಿತಿ ತಿಳಿಯುತ್ತದೆ. ಇದರ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸ್ಪಂದಿಸದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.</p>.<div><blockquote>ರಸ್ತೆ ಸಮಸ್ಯೆ ಬಗ್ಗೆ ಪ್ರತಿ ಬಾರಿಯೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ</blockquote><span class="attribution"> ದೇವಣ್ಣ ನಾಯಕ ನವಲಕಲ್ಲು</span></div>.<div><blockquote>ರಸ್ತೆ ದುರಸ್ತಿ ಮಾಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ </blockquote><span class="attribution">ದುರುಗಮ್ಮ ಮಲ್ಲಪ್ಪ ಗ್ರಾ.ಪಂ ಅಧ್ಯಕ್ಷೆ ನವಲಕಲ್ಲು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ:</strong> ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಕೆಸರು ಗದ್ದೆಗಳಾಗಿ ಮಾರ್ಪಟ್ಟಿವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿಡಿದುಕೊಂಡು ಪ್ರಯಾಣಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.</p>.<p>ಪಟ್ಟಣದಿಂದ ಮರಾಟ, ಮುರ್ಕಿಗುಡ್ಡ ಸೇರಿದಂತೆ ಹಳ್ಳಿ ಮತ್ತು ತಾಂಡಾಗಳ ರಸ್ತೆಗಳಲ್ಲಿ ನೀರು ನಿಂತುಕೊಂಡ ಕಾರಣ ಅದನ್ನು ದಾಟಲು ಪರದಾಡಬೇಕಾದ ಸ್ಥಿತಿ ಇದೆ.</p>.<p>ಶಾಲೆಗಳು ಆರಂಭವಾಗಿರುವುದರಿಂದ ಪಟ್ಟಣದ ಶಾಲಾ–ಕಾಲೇಜುಗಳಿಗೆ ವಿದ್ಯಾರ್ಥಿಗಳು ನಡೆದುಕೊಂಡು, ದ್ವಿಚಕ್ರ ವಾಹನ ಅಥವಾ ಆಟೊಗಳಲ್ಲಿ ಬರಬೇಕಾದ ಅನಿವಾರ್ಯತೆ ಎದುರಾಗಿದೆ.</p>.<p>‘ಮಳೆಗಾಲ ಬಂತೆಂದರೆ ಸಾಕು ಪ್ರತಿವರ್ಷ ರಸ್ತೆಗಳ ಸ್ಥಿತಿ ಇದೇ ರೀತಿಯಾಗಿರುತ್ತದೆ. ಮಳೆಗಾಲ ಮುಗಿಯುವುದರೊಳಗೆ ಅಲ್ಪಸ್ವಲ್ಪ ಮರಂ, ಕಂಕರ್ ಹಾಕಿ ರಸ್ತೆ ದುರಸ್ತಿ ನೆಪದಲ್ಲಿ ಹಣ ಲೂಟಿ ಮಾಡಲಾಗುತ್ತದೆ. ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದಿಲ್ಲ’ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.</p>.<p>ಸಾಂಕ್ರಾಮಿಕ ರೋಗ ಭೀತಿ: ರಸ್ತೆಯಲ್ಲಿ ಮಳೆ ನೀರು ಸಂಗ್ರಹವಾಗುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ.</p>.<p>ರಸ್ತೆ ಪಕ್ಕದಲ್ಲಿ ಬೇಲಿ: ರಸ್ತೆ ಪಕ್ಕದಲ್ಲಿ ಜಾಲಿ ಗಿಡಗಳು ಬೆಳೆದು ರಸ್ತೆಗೆ ಬೇಲಿ ಹಾಕಿದಂತಾಗಿದೆ. ರಸ್ತೆಯಲ್ಲಿ ನೀರು, ಪಕ್ಕದಲ್ಲಿ ಜಾಲಿ ಗಿಡಗಳಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ.</p>.<p>‘ಅಧಿಕಾರಿಗಳ ನಿರ್ಲಕ್ಷ್ಯ’: ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹೆಚ್ಚು ಎಂದರೆ ತಾಲ್ಲೂಕು ಕೇಂದ್ರಗಳಿಗೆ ಬಂದು ಹೋಗುತ್ತಾರೆ. ಗ್ರಾಮೀಣ ಪ್ರದೇಶಗಳ ಕಡೆ ಬಂದರೆ ಮಾತ್ರ ಇಲ್ಲಿನ ರಸ್ತೆಗಳ ಪರಿಸ್ಥಿತಿ ತಿಳಿಯುತ್ತದೆ. ಇದರ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸ್ಪಂದಿಸದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.</p>.<div><blockquote>ರಸ್ತೆ ಸಮಸ್ಯೆ ಬಗ್ಗೆ ಪ್ರತಿ ಬಾರಿಯೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ</blockquote><span class="attribution"> ದೇವಣ್ಣ ನಾಯಕ ನವಲಕಲ್ಲು</span></div>.<div><blockquote>ರಸ್ತೆ ದುರಸ್ತಿ ಮಾಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ </blockquote><span class="attribution">ದುರುಗಮ್ಮ ಮಲ್ಲಪ್ಪ ಗ್ರಾ.ಪಂ ಅಧ್ಯಕ್ಷೆ ನವಲಕಲ್ಲು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>