ಆಡಳಿತ ನಡೆಸಿದ ಎಲ್ಲ ಸರ್ಕಾರಗಳು ವರದಿ ಅಂಗೀಕರಿಸದೇ ನಿರ್ಲಕ್ಷ್ಯ ವಹಿಸಿವೆ. ಒಂಭತ್ತು ವರ್ಷಗಳ ಹಿಂದೆ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗಿತ್ತು. ಆಗ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದ್ದರು. ನಿರಂತರ ಹೋರಾಟದ ಮೂಲಕ ಚಳವಳಿ ಜೀವಂತವಾಗಿಟ್ಟಿದ್ದೇವೆ. ಮುಂಬರುವ ಅಧಿವೇಶನದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದರು.