ಪ್ರತಿಜ್ಞಾವಿಧಿಯನ್ನು ಬೋಧಿಸಿದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಸಂತೋಷಕುಮಾರ ರೇವೂರ್ ಮಾತನಾಡಿ, ‘ದೇಶದ ಪ್ರಜೆಗಳು ಅದರಲ್ಲೂ ವಿಶೇಷವಾಗಿ ಯುವ ಸಮುದಾಯ ದೇಶವನ್ನು ಬಲಿಷ್ಠವನ್ನಾಗಿಸಲು ಅಗತ್ಯವಾಗಿರುವ ಸಾಮಾಜಿಕ ಶಾಂತಿ, ಸಾಮರಸ್ಯ, ಕೋಮು ಸೌಹಾರ್ದತೆ, ಸಹಿಷ್ಣುತೆ, ಸಂಯಮ ಮುಂತಾದ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಮುಖ್ಯವಾಗಿದೆ‘ ಎಂದರು.