ಗುರುವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಸ್ತುತ ದಿನಗಳಲ್ಲಿ ಕೋಮು ಗಲಭೆಗಳು ಹೆಚ್ಚುತ್ತಿವೆ. ಹಿಂದೂ, ಕ್ರೈಸ್ತ ಮುಸ್ಲಿಮರಲ್ಲಿ ಪರಸ್ಪರ ದ್ವೇಷ ಭಾವನೆಗಳನ್ನು ಬಿತ್ತಲಾಗುತ್ತಿದೆ. ಆದ್ದರಿಂದ ‘ಸಾಮರಸ್ಯ ನಡಿಗೆ ಸಹಬಾಳ್ವೆಯ ಕಡೆಗೆ, ದ್ವೇಷ ಕಳೆಯೋಣ ಕೂಡಿ ಬಾಳೋಣ’ ಎನ್ನುವ ಚಿಂತನೆಯೊಂದಿಗೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೌಹಾರ್ದ, ಸಹಬಾಳ್ವೆಯ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದರು.