<p><strong>ಮಾನ್ವಿ:</strong> ‘ಮೇ 14ರಂದು ಉಡುಪಿಯಲ್ಲಿ ಧರ್ಮಗಳ ಮಧ್ಯೆ ಪರಸ್ಪರ ಸೌಹಾರ್ಧತೆ ಬೆಳೆಸುವ ಉದ್ದೇದಿಂದ ರಾಜ್ಯ ಮಟ್ಟದ ಸಹಬಾಳ್ವೆ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ಜನಶಕ್ತಿಯ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಹೇಳಿದರು.</p>.<p>ಗುರುವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಸ್ತುತ ದಿನಗಳಲ್ಲಿ ಕೋಮು ಗಲಭೆಗಳು ಹೆಚ್ಚುತ್ತಿವೆ. ಹಿಂದೂ, ಕ್ರೈಸ್ತ ಮುಸ್ಲಿಮರಲ್ಲಿ ಪರಸ್ಪರ ದ್ವೇಷ ಭಾವನೆಗಳನ್ನು ಬಿತ್ತಲಾಗುತ್ತಿದೆ. ಆದ್ದರಿಂದ ‘ಸಾಮರಸ್ಯ ನಡಿಗೆ ಸಹಬಾಳ್ವೆಯ ಕಡೆಗೆ, ದ್ವೇಷ ಕಳೆಯೋಣ ಕೂಡಿ ಬಾಳೋಣ’ ಎನ್ನುವ ಚಿಂತನೆಯೊಂದಿಗೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೌಹಾರ್ದ, ಸಹಬಾಳ್ವೆಯ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>‘ಕಾರ್ಯಕ್ರಮಕ್ಕೆ ಮಾನವ ಹಕ್ಕು ಹೋರಾಟಗಾರ ಯೋಗೇಂದ್ರ ಯಾದವ್, ಮಹಿಳಾ ಹೋರಾಟಗಾರ್ತಿ ಕೆ.ನೀಲಾ, ನಿವೃತ್ತ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್, ಡಾ.ಮಹ್ಮದ್ ಸೈಯದ್, ನಜ್ಮಾ ನಜೀರ್ ಚಿಕ್ಕನೇರಳೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಗಣ್ಯರು ಭಾಗವಹಿಸುವರು’ ಎಂದರು.</p>.<p>ಮುಖಂಡರಾದ ರವೀಂದ್ರ ಜಾನೇಕಲ್, ಲಕ್ಷ್ಮಣ ಜಾನೇಕಲ್, ಜಿಶಾನ್ ಅಖಿಲ್, ಅಶೋಕ ನಿಲೋಗಲ್, ಯಲ್ಲಪ್ಪ ಹಿರೆಬಾದರದಿನ್ನಿ, ಹನುಮಂತ ಕೋಟೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ‘ಮೇ 14ರಂದು ಉಡುಪಿಯಲ್ಲಿ ಧರ್ಮಗಳ ಮಧ್ಯೆ ಪರಸ್ಪರ ಸೌಹಾರ್ಧತೆ ಬೆಳೆಸುವ ಉದ್ದೇದಿಂದ ರಾಜ್ಯ ಮಟ್ಟದ ಸಹಬಾಳ್ವೆ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ಜನಶಕ್ತಿಯ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಹೇಳಿದರು.</p>.<p>ಗುರುವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಸ್ತುತ ದಿನಗಳಲ್ಲಿ ಕೋಮು ಗಲಭೆಗಳು ಹೆಚ್ಚುತ್ತಿವೆ. ಹಿಂದೂ, ಕ್ರೈಸ್ತ ಮುಸ್ಲಿಮರಲ್ಲಿ ಪರಸ್ಪರ ದ್ವೇಷ ಭಾವನೆಗಳನ್ನು ಬಿತ್ತಲಾಗುತ್ತಿದೆ. ಆದ್ದರಿಂದ ‘ಸಾಮರಸ್ಯ ನಡಿಗೆ ಸಹಬಾಳ್ವೆಯ ಕಡೆಗೆ, ದ್ವೇಷ ಕಳೆಯೋಣ ಕೂಡಿ ಬಾಳೋಣ’ ಎನ್ನುವ ಚಿಂತನೆಯೊಂದಿಗೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೌಹಾರ್ದ, ಸಹಬಾಳ್ವೆಯ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>‘ಕಾರ್ಯಕ್ರಮಕ್ಕೆ ಮಾನವ ಹಕ್ಕು ಹೋರಾಟಗಾರ ಯೋಗೇಂದ್ರ ಯಾದವ್, ಮಹಿಳಾ ಹೋರಾಟಗಾರ್ತಿ ಕೆ.ನೀಲಾ, ನಿವೃತ್ತ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್, ಡಾ.ಮಹ್ಮದ್ ಸೈಯದ್, ನಜ್ಮಾ ನಜೀರ್ ಚಿಕ್ಕನೇರಳೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಗಣ್ಯರು ಭಾಗವಹಿಸುವರು’ ಎಂದರು.</p>.<p>ಮುಖಂಡರಾದ ರವೀಂದ್ರ ಜಾನೇಕಲ್, ಲಕ್ಷ್ಮಣ ಜಾನೇಕಲ್, ಜಿಶಾನ್ ಅಖಿಲ್, ಅಶೋಕ ನಿಲೋಗಲ್, ಯಲ್ಲಪ್ಪ ಹಿರೆಬಾದರದಿನ್ನಿ, ಹನುಮಂತ ಕೋಟೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>