ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಮಂತ್ರಾಲಯಕ್ಕೆ ಬಂದ ತಿರುಪತಿ ತಿರುಮಲ ದೇವಸ್ಥಾನದ ಶೇಷವಸ್ತ್ರ

Published 1 ಸೆಪ್ಟೆಂಬರ್ 2023, 6:37 IST
Last Updated 1 ಸೆಪ್ಟೆಂಬರ್ 2023, 6:37 IST
ಅಕ್ಷರ ಗಾತ್ರ

ಮಂತ್ರಾಲಯ (ರಾಯಚೂರು): ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಅಂಗವಾಗಿ ಮಂತ್ರಾಲಯಕ್ಕೆ ತಿರುಪತಿ ತಿರುಮಲ ದೇವಸ್ಥಾನದಿಂದ ಶೇಷ ವಸ್ತ್ರ ತರಲಾಗಿದೆ.

ತಿರುಪತಿಯಿಂದ ಶೇಷ ವಸ್ತ್ರ ತಂದ ಪ್ರತಿನಿಧಿಗಳಿಗೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಡಳಿತ ಅಧಿಕಾರಿ, ಸಿಬ್ಬಂದಿ ಸ್ವಾಗತ ನೀಡಿದರು. ನಂತರ ಶ್ರೀ ಮಠದ ಆವರಣದಿಂದ ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಮಠದೊಳಗೆ ಒಯ್ಯಲಾಯಿತು.

ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶೇಷ ವಸ್ತ್ರವನ್ನು ಸ್ವೀಕರಿಸಿ ತಲೆಯ ಮೇಲೆ ಹೊತ್ತು ಮೂಲ ವೃಂದಾವನ ಪ್ರದಕ್ಷಿಣೆ ಮಾಡುವ ಮೂಲಕ ರಾಯರಿಗೆ ಸಮರ್ಪಿಸಿದರು.

ನಂತರ ಶ್ರೀಗಳು ಮಾತನಾಡಿ, ‘ಇಂದು ಭೂ ಲೋಕದ ಒಡೆಯ ಶ್ರೀನಿವಾಸ ಶೇಷ ವಸ್ತ್ರದ ಮೂಲಕ ಗುರುರಾಯರ ಸನ್ನಿಧಾನಕ್ಕೆ ಬಂದಿದ್ದಾನೆ, ಕಳೆದ ಅನೇಕ ವರ್ಷಗಳಿಂದ

ಗುರುರಾಯರ ಆರಾಧನೆ ಸಮಯದಲ್ಲಿ ಪ್ರತಿ ವರ್ಷ ತಿರುಪತಿಯ ಶ್ರೀನಿವಾಸನ ಸನ್ನಿಧಿಯಿಂದ ಶೇಷ ವಸ್ತ್ರವನ್ನು ಅಲ್ಲಿನ ದೇವಸ್ಥಾನ ಆಡಳಿತ ಮಂಡಳಿ ತಪ್ಪದೆ ವಾಡಿಕೆ ತಪ್ಪದೆ ಪಾಲಿಸುತ್ತ ಬಂದಿದೆ. ನಾಡ ನುಡಿಯಂತೆ ದೇವರು ಎಂದರೆ ತಿರುಪತಿ ತಿಮ್ಮಪ್ಪ ಗುರುಗಳು ಎಂದರೆ ಮಂತ್ರಾಲಯ ರಾಗಪ್ಪ ಎನ್ನುವ ಹಾಗೆ ತಿರುಪತಿ ಮಂತ್ರಾಲಯ ನಡುವೆ ಅವಿನಾವ ಸಂಬಂಧ ಹೊಂದಿದೆ’ ಎಂದರು.

ತಿರುಪತಿ ತಿರುಮಲ ದೇವಸ್ಥಾನದ ಜೆ. ಇ. ಒ. ಶ್ರೀ ವೀರಬ್ರಮಹೇಂದ್ರ ಮಾತನಾಡಿ, ‘ಇಂದು ಗುರುರಾಯರ ಮದ್ಯಾರಾಧನೆ ಸಮಯದಲ್ಲಿ ತಿರುಪತಿಯಿಂದ ಶೇಷ ವಸ್ತ್ರ ನೀಡುವ ಪರಂಪರೆ ಮುಂದುವರಿಸಲಾಗಿದೆ. ತಿರುಪತಿಯಿಂದ ತಂದ ಶೇಷ ವಸ್ತ್ರವನ್ನು ಶ್ರೀ ಗಳ ಮೂಲಕ ಗುರುರಾಯರಿಗೆ ಅರ್ಪಿಸಲಾಗಿದೆ’ ಎಂದರು.

ಇದೇ ವೇಳೆ ಶ್ರೀಗಳು ಶರತ ಕುಮಾರ, ವರ್ಣಬೇಧ, ಸಾಧನೆಯಲ್ಲಿ ಹಿಂದೆ, ನಾವೆಕೆ ಎಚ್ಚರವಿಲ್ಲ,ಯಾರು ಸಾಧಕರು,ನಮ್ಮಲ್ಲಿ ಇರಬೇಕಾದ ಗುಣಗಳ ಸಮೀಕ್ಷೆ, ನಮ್ಮಲ್ಲಿ ಇರುವ ದೋಷಗಳ ಸಮೀಕ್ಷೆ, ಬೃಹ್ಮ ತತ್ವ, ಬೃಹ್ಮ ಸೋತ್ರ ಭಾಷೆ, ಶ್ರೀ ಪಾದರ 11 ವರ್ಷದ ಸಾಧನೆ ಸೇರಿದಂತೆ ಇತರೆ ಕಿರು ಹೊತ್ತಿಗೆ ಬಿಡುಗಡೆಗೊಳಿಸಿದರು.

ತಿರುಪತಿ ತಿರುಮಲ ವಿದ್ವಾನ ವಾದಿರಾಜ ಆಚಾರ್ಯ, ವಿದ್ವಾನ ಸುಧೀಂದ್ರ ಅಚಾರ್ಯ, ಧರಶ್ರೀ ಆಚಾರ್ಯ, ಶ್ರೀ ಮಠದ ಆಡಳಿತಾಧಿಕಾರಿ ಮಾಧವಶೆಟ್ಟಿ, ವ್ಯವಸ್ಥಾಪಕ ಎಸ್.ಕೆ ಶ್ರಿನಿವಾಸರಾವ್, ವೆಂಕಟೇಶ್ ಜೋಶಿ, ಗುರುಸಾರಭೌಮ ವಿದ್ಯಾಪೀಠದ ಪ್ರಾಚಾರ್ಯ ರಮಣರಾವ್, ಶ್ರೀ ಮಠದ ಮಾಧ್ಯಮ ಉಸ್ತುವಾರಿ ಶ್ರೀನಿಧಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT