<p><strong>ರಾಯಚೂರು:</strong> ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕು ಕೊಳ್ಳೂರ ಗ್ರಾಮದ ಸಾಮಾಜಿಕ ಕಾರ್ಯಕರ್ತ ಹನುಮಂತ ಭಂಗಿ ಅವರ ಮೇಲೆ ಮಾಜಿ ಸಂಸದ ಬಿ.ವಿ. ನಾಯಕ ಅವರ ಸೋದರಳಿಯ ಶ್ರೀನಿವಾಸ ನಾಯಕ ಅವರು ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗಿದೆ.</p>.<p>ಖಾಸಗಿ ಹೊಟೇಲ್ ಕೋಣೆಯೊಂದರಲ್ಲಿ ಕೂಡಿಹಾಕಿದ್ದು, ತಮ್ಮ ತಂಟೆಗೆ ಬರದಂತೆ ಎಚ್ಚರಿಕೆ ನೀಡಿ ಕಪಾಳಕ್ಕೆ ಬಾರಿಸುವ ದೃಶ್ಯ ಅದರಲ್ಲಿದೆ. ಹಲ್ಲೆಗೊಳಗಾದ ಹನುಮಂತ ಭಂಗಿ ಅವರು ಸದ್ಯ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ರಕ್ಷಣೆ ನೀಡಲಾಗಿದೆ.</p>.<p>ಮರಳು ದಂಧೆಕೋರರಾದ ಶ್ರೀನಿವಾಸ ನಾಯಕ, ಅಶೋಕ, ರವಿ ಸೇರಿದಂತೆ ಇತರೆ ನಾಲ್ಕು ಜನರು ಬಾಗೂರ ಗ್ರಾಮದಲ್ಲಿ ಜುಲೈ 5ರಂದು ರಾತ್ರಿಯಿಡೀ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಭಂಗಿ ಅವರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ದೂರು ಪಡೆದ ಪೊಲೀಸರು ಹನುಮಂತ ಅವರನ್ನು ಹಲ್ಲೆ ನಡೆದ ಸ್ಥಳಗಳಿಗೆ ಕರೆದೊಯ್ದು ಸ್ಥಳ ಮಹಜರು ಮಾಡಿಕೊಂಡಿದ್ದಾರೆ. ಮರಳು ದಂಧೆಕೋರರ ವಿರುದ್ಧ ದೂರು ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.</p>.<p>ಅಕ್ರಮ ಮರಳು ದಂಧೆ ವಿರುದ್ಧ ಬೆಂಗಳೂರಿನ ಹೈಕೋರ್ಟ್ನಲ್ಲಿ ಹನುಮಂತ ಭಂಗಿ ಅವರು ಕೆಲವು ತಿಂಗಳುಗಳ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಾಪಸ್ ಪಡೆಯುವಂತೆ ಹನುಮಂತಪ್ಪ ಮೇಲೆ ಮರಳು ದಂಧೆಕೋರರು ಒತ್ತಡ ಹಾಕಿ, ಹಲ್ಲೆ ಮಾಡಿದ್ದಾರೆ.</p>.<p>ಹಲ್ಲೆ ನಡೆಸಿದ ದಿನದಂದು ಐದು ಲಕ್ಷ ಹಣವನ್ನು ಹನುಮಂತಪ್ಪಗೆ ನೀಡಿದ ಆರೋಪಿಗಳು, ಈ ಹಣವನ್ನು ಪಡೆದುಕೊಳ್ಳುವಂತೆ ಹೇಳಿ ಅದರ ದೃಶ್ಯವನ್ನು ಆರೋಪಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ಮತ್ತೆ ಹಣವನ್ನು ಕಿತ್ತುಕೊಂಡು ಕೆಲವು ಕಾಗದಗಳ ಮೇಲೆ ಸಹಿ ಪಡೆದುಕೊಂಡಿದ್ದಾರೆ ಎಂದು ಠಾಣೆಗೆ ನೀಡಿರುವ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕು ಕೊಳ್ಳೂರ ಗ್ರಾಮದ ಸಾಮಾಜಿಕ ಕಾರ್ಯಕರ್ತ ಹನುಮಂತ ಭಂಗಿ ಅವರ ಮೇಲೆ ಮಾಜಿ ಸಂಸದ ಬಿ.ವಿ. ನಾಯಕ ಅವರ ಸೋದರಳಿಯ ಶ್ರೀನಿವಾಸ ನಾಯಕ ಅವರು ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗಿದೆ.</p>.<p>ಖಾಸಗಿ ಹೊಟೇಲ್ ಕೋಣೆಯೊಂದರಲ್ಲಿ ಕೂಡಿಹಾಕಿದ್ದು, ತಮ್ಮ ತಂಟೆಗೆ ಬರದಂತೆ ಎಚ್ಚರಿಕೆ ನೀಡಿ ಕಪಾಳಕ್ಕೆ ಬಾರಿಸುವ ದೃಶ್ಯ ಅದರಲ್ಲಿದೆ. ಹಲ್ಲೆಗೊಳಗಾದ ಹನುಮಂತ ಭಂಗಿ ಅವರು ಸದ್ಯ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ರಕ್ಷಣೆ ನೀಡಲಾಗಿದೆ.</p>.<p>ಮರಳು ದಂಧೆಕೋರರಾದ ಶ್ರೀನಿವಾಸ ನಾಯಕ, ಅಶೋಕ, ರವಿ ಸೇರಿದಂತೆ ಇತರೆ ನಾಲ್ಕು ಜನರು ಬಾಗೂರ ಗ್ರಾಮದಲ್ಲಿ ಜುಲೈ 5ರಂದು ರಾತ್ರಿಯಿಡೀ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಭಂಗಿ ಅವರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ದೂರು ಪಡೆದ ಪೊಲೀಸರು ಹನುಮಂತ ಅವರನ್ನು ಹಲ್ಲೆ ನಡೆದ ಸ್ಥಳಗಳಿಗೆ ಕರೆದೊಯ್ದು ಸ್ಥಳ ಮಹಜರು ಮಾಡಿಕೊಂಡಿದ್ದಾರೆ. ಮರಳು ದಂಧೆಕೋರರ ವಿರುದ್ಧ ದೂರು ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.</p>.<p>ಅಕ್ರಮ ಮರಳು ದಂಧೆ ವಿರುದ್ಧ ಬೆಂಗಳೂರಿನ ಹೈಕೋರ್ಟ್ನಲ್ಲಿ ಹನುಮಂತ ಭಂಗಿ ಅವರು ಕೆಲವು ತಿಂಗಳುಗಳ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಾಪಸ್ ಪಡೆಯುವಂತೆ ಹನುಮಂತಪ್ಪ ಮೇಲೆ ಮರಳು ದಂಧೆಕೋರರು ಒತ್ತಡ ಹಾಕಿ, ಹಲ್ಲೆ ಮಾಡಿದ್ದಾರೆ.</p>.<p>ಹಲ್ಲೆ ನಡೆಸಿದ ದಿನದಂದು ಐದು ಲಕ್ಷ ಹಣವನ್ನು ಹನುಮಂತಪ್ಪಗೆ ನೀಡಿದ ಆರೋಪಿಗಳು, ಈ ಹಣವನ್ನು ಪಡೆದುಕೊಳ್ಳುವಂತೆ ಹೇಳಿ ಅದರ ದೃಶ್ಯವನ್ನು ಆರೋಪಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ಮತ್ತೆ ಹಣವನ್ನು ಕಿತ್ತುಕೊಂಡು ಕೆಲವು ಕಾಗದಗಳ ಮೇಲೆ ಸಹಿ ಪಡೆದುಕೊಂಡಿದ್ದಾರೆ ಎಂದು ಠಾಣೆಗೆ ನೀಡಿರುವ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>