ಗಣಿ ಕಂಪನಿ ಅಧಿಸೂಚಿತ ಪ್ರದೇಶ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಹೊಲ ಹಾಗೂ ಕಾಲೊನಿಗಳಲ್ಲಿ ಯಥೇಚ್ಛವಾಗಿ ಶ್ರೀಗಂಧದ ಮರಗಳನ್ನು ಬೆಳೆಸಲಾಗಿದೆ. ಬೆಲೆ ಬಾಳುವ ಗಂಧದ ಮರಗಳನ್ನು ಕತ್ತರಿಸಿಕೊಂಡು ಹೋಗುವ ಜಾಲ ಪಟ್ಟಣದಲ್ಲಿ ಬೀಡು ಬಿಟ್ಟಿರುವ ಶಂಕೆ ಇದೆ. ಆದರೂ ಕಳ್ಳರ ಪತ್ತೆಗೆ ಪೊಲೀಸ್ ಹಾಗೂ ಅರಣ್ಯ ಇಲಾಖೆ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.