ಲಿಂಗಸುಗೂರು (ರಾಯಚೂರು ಜಿಲ್ಲೆ):ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನಿಸಿ, ನಿಂದನೆ ಮಾಡಿದ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುರುಬ ಸಮಾಜದ ಮುಖಂಡ ಗದ್ದೆನಗೌಡ ಪಾಟೀಲ ಲಿಂಗಸುಗೂರು ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಿಸಿದ್ದಾರೆ.