<p><strong>ರಾಯಚೂರು:</strong> ನಗರ ಸೇರಿ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಭಾನುವಾರ ಸಂಕ್ರಾಂತಿ ಹಬ್ಬದ ಆಚರಣೆ ನಡೆಯಿತು.</p>.<p>ಸಂಕಮಣದ ಅಂಗವಾಗಿ ಜನರು ಜಿಲ್ಲೆಯಲ್ಲಿ ಕೃಷ್ಣ ಮತ್ತು ತುಂಗಭದ್ರಾ ನದಿಗಳ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಕುಟುಂಬ ಸಮೇತ ತೆರಳಿದ ಜನರು ಪುಣ್ಯಸ್ನಾನ ಮಾಡಿದರು. ಕೃಷ್ಣೆ, ತುಂಗಭದ್ರಾ ನದಿಗಳಲ್ಲಿ ಜನರು ತಂಡೋಪತಂಡವಾಗಿ ಮಿಂದು, ದೇವರಿಗೆ ಪೂಜೆ ಸಲ್ಲಿಸಿದರು.</p>.<p>ಬಳಿಕ ನದಿ ದಡದಲ್ಲಿ ಜನರು ಕುಳಿತುಕೊಂಡು ಸಜ್ಜೆ ರೊಟ್ಟಿ, ಎಳ್ಳು, ಶೇಂಗಾದ ಹೋಳಿಗೆ, ಭರ್ತ (ತರಕಾರಿ ಖಾದ್ಯ), ಎಣ್ಣೆ ಬದನೆಕಾಯಿ, ಚಿತ್ರಾನ್ನ, ಮೊಸರನ್ನ ಸೇರಿದಂತೆ ಹಲವು ಬಗೆ ಬಗೆಯ ಭಕ್ಷ್ಯ ಖಾದ್ಯಗಳ ಬೋಜನ ಸವಿದರು.</p>.<p>ಜಿಲ್ಲೆಯ ಪ್ರಮುಖ ಪ್ರೇಕ್ಷಣೀಯ, ಧಾರ್ಮಿಕ ತಾಣಗಳಾದ ಗೂಗಲ್ ಪ್ರಭುಸ್ವಾಮಿ, ಕೃಷ್ಣಾ, ಕುರುವಪುರ, ನಾರದಗಡ್ಡೆ, ಎಲೆ ಬಿಚ್ಚಾಲಿ, ರಾಜಲಬಂಡಾ, ಮಂತ್ರಾಲಯ, ಕೊಪ್ಪರದ ಲಕ್ಷ್ಮಿನರಸಿಂಹ ಸ್ವಾಮಿ, ತಿಂಥಿಣಿ ಮೌನೇಶ್ವರ, ಗುರುಗುಂಟಾ ಅಮರೇಶ್ವರ, ನಾರದಗಡ್ಡೆ, ರಾಮಗಡ್ಡೆಗಳಿಗೆ ಜನರು ತೆರಳಿ ದೇವರ ದರ್ಶನವನ್ನು ಪಡೆದುಕೊಂಡರು.</p>.<p>ಹಬ್ಬದ ನಿಮಿತ್ತ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಶ್ರೀರಾಯರ ಬೃಂದಾವನದ ದರ್ಶನ ಪಡೆದರು. ತುಂಗಭದ್ರಾ ನದಿ ಪಾತ್ರದ ಬಿಚ್ಚಾಲಿ, ಮಂತ್ರಾಲಯ, ಚೀಕಲಪರ್ವಿ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದರು.</p>.<p>ನಗರದ ನಂದೀಶ್ವರ ದೇವಸ್ಥಾನ, ಚಂದ್ರಮೌಳೇಶ್ವರ, ನಗರೇಶ್ವರ, ದೇವಸೂಗೂರಿನ ಸೂಗೂರೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.</p>.<p>ಗ್ರಾಮೀಣ ಭಾಗದಲ್ಲೂ ಎತ್ತು ಓಡಿಸುವ, ಕಲ್ಲು ಎತ್ತುವ, ಉಸುಕಿನ ಚೀಲ ಹೊರುವ ಸ್ಪರ್ಧೆಯಂಥ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಸಂಕ್ರಾಂತಿ ಹಬ್ಬದ ವಿಶೇಷವೆಂದ ಮನೆ ಮುಂದೆ ಪಾಂಡವರ ಪ್ರತಿಷ್ಠಾಪನೆ ಹಾಗೂ ರಂಗೋಲಿ ಹಾಕಿ ಅಲಂಕರಿಸಿರುವುದು ಕಂಡು ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ನಗರ ಸೇರಿ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಭಾನುವಾರ ಸಂಕ್ರಾಂತಿ ಹಬ್ಬದ ಆಚರಣೆ ನಡೆಯಿತು.</p>.<p>ಸಂಕಮಣದ ಅಂಗವಾಗಿ ಜನರು ಜಿಲ್ಲೆಯಲ್ಲಿ ಕೃಷ್ಣ ಮತ್ತು ತುಂಗಭದ್ರಾ ನದಿಗಳ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಕುಟುಂಬ ಸಮೇತ ತೆರಳಿದ ಜನರು ಪುಣ್ಯಸ್ನಾನ ಮಾಡಿದರು. ಕೃಷ್ಣೆ, ತುಂಗಭದ್ರಾ ನದಿಗಳಲ್ಲಿ ಜನರು ತಂಡೋಪತಂಡವಾಗಿ ಮಿಂದು, ದೇವರಿಗೆ ಪೂಜೆ ಸಲ್ಲಿಸಿದರು.</p>.<p>ಬಳಿಕ ನದಿ ದಡದಲ್ಲಿ ಜನರು ಕುಳಿತುಕೊಂಡು ಸಜ್ಜೆ ರೊಟ್ಟಿ, ಎಳ್ಳು, ಶೇಂಗಾದ ಹೋಳಿಗೆ, ಭರ್ತ (ತರಕಾರಿ ಖಾದ್ಯ), ಎಣ್ಣೆ ಬದನೆಕಾಯಿ, ಚಿತ್ರಾನ್ನ, ಮೊಸರನ್ನ ಸೇರಿದಂತೆ ಹಲವು ಬಗೆ ಬಗೆಯ ಭಕ್ಷ್ಯ ಖಾದ್ಯಗಳ ಬೋಜನ ಸವಿದರು.</p>.<p>ಜಿಲ್ಲೆಯ ಪ್ರಮುಖ ಪ್ರೇಕ್ಷಣೀಯ, ಧಾರ್ಮಿಕ ತಾಣಗಳಾದ ಗೂಗಲ್ ಪ್ರಭುಸ್ವಾಮಿ, ಕೃಷ್ಣಾ, ಕುರುವಪುರ, ನಾರದಗಡ್ಡೆ, ಎಲೆ ಬಿಚ್ಚಾಲಿ, ರಾಜಲಬಂಡಾ, ಮಂತ್ರಾಲಯ, ಕೊಪ್ಪರದ ಲಕ್ಷ್ಮಿನರಸಿಂಹ ಸ್ವಾಮಿ, ತಿಂಥಿಣಿ ಮೌನೇಶ್ವರ, ಗುರುಗುಂಟಾ ಅಮರೇಶ್ವರ, ನಾರದಗಡ್ಡೆ, ರಾಮಗಡ್ಡೆಗಳಿಗೆ ಜನರು ತೆರಳಿ ದೇವರ ದರ್ಶನವನ್ನು ಪಡೆದುಕೊಂಡರು.</p>.<p>ಹಬ್ಬದ ನಿಮಿತ್ತ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಶ್ರೀರಾಯರ ಬೃಂದಾವನದ ದರ್ಶನ ಪಡೆದರು. ತುಂಗಭದ್ರಾ ನದಿ ಪಾತ್ರದ ಬಿಚ್ಚಾಲಿ, ಮಂತ್ರಾಲಯ, ಚೀಕಲಪರ್ವಿ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದರು.</p>.<p>ನಗರದ ನಂದೀಶ್ವರ ದೇವಸ್ಥಾನ, ಚಂದ್ರಮೌಳೇಶ್ವರ, ನಗರೇಶ್ವರ, ದೇವಸೂಗೂರಿನ ಸೂಗೂರೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.</p>.<p>ಗ್ರಾಮೀಣ ಭಾಗದಲ್ಲೂ ಎತ್ತು ಓಡಿಸುವ, ಕಲ್ಲು ಎತ್ತುವ, ಉಸುಕಿನ ಚೀಲ ಹೊರುವ ಸ್ಪರ್ಧೆಯಂಥ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಸಂಕ್ರಾಂತಿ ಹಬ್ಬದ ವಿಶೇಷವೆಂದ ಮನೆ ಮುಂದೆ ಪಾಂಡವರ ಪ್ರತಿಷ್ಠಾಪನೆ ಹಾಗೂ ರಂಗೋಲಿ ಹಾಕಿ ಅಲಂಕರಿಸಿರುವುದು ಕಂಡು ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>