<p><strong>ಮಾನ್ವಿ (ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಗುರುವಾರ ಸಂಕ್ರಾಂತಿ ಹಬ್ಬದ ನಿಮಿತ್ತ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ನೀರುಪಾಲಾಗಿದ್ದಾರೆ.</p>.<p>ಮೃತ ಯುವಕನನ್ನು ಮಾನ್ವಿ ಪಟ್ಟಣದ ವಂಶಿ ರೆಡ್ಡಿ ರಾಜಲದಿನ್ನಿ (28) ಎಂದು ಗುರುತಿಸಲಾಗಿದೆ. ವಂಶಿ ರೆಡ್ಡಿ ಅವರು ಸ್ನಾನಕ್ಕಾಗಿ ನೀರಿಗೆ ಇಳಿದಾಗ ಮುಳುಗಿ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.ವಿಷಯ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದರು. </p>.<p class="Briefhead">ವಿದ್ಯಾರ್ಥಿ ಸಾವು</p>.<p>ಶಹಾಬಾದ್ (ಕಲಬುರಗಿ ಜಿಲ್ಲೆ): ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಕಾಗಿಣಾ ನದಿಯಲ್ಲಿ ಈಜಲು ಹೋದ ಇಲ್ಲಿನ ಹನುಮಾನ ನಗರದ ನಿವಾಸಿ ವೆಂಕಟೇಶ (16) ಮೃತಪಟ್ಟಿದ್ದಾನೆ. </p>.<p>ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿ ಬಾಲಕನ ಮೃತದೇಹವನ್ನು ಶಹಾಬಾದ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಅವರ ತಂದೆ–ತಾಯಿ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ (ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಗುರುವಾರ ಸಂಕ್ರಾಂತಿ ಹಬ್ಬದ ನಿಮಿತ್ತ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ನೀರುಪಾಲಾಗಿದ್ದಾರೆ.</p>.<p>ಮೃತ ಯುವಕನನ್ನು ಮಾನ್ವಿ ಪಟ್ಟಣದ ವಂಶಿ ರೆಡ್ಡಿ ರಾಜಲದಿನ್ನಿ (28) ಎಂದು ಗುರುತಿಸಲಾಗಿದೆ. ವಂಶಿ ರೆಡ್ಡಿ ಅವರು ಸ್ನಾನಕ್ಕಾಗಿ ನೀರಿಗೆ ಇಳಿದಾಗ ಮುಳುಗಿ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.ವಿಷಯ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದರು. </p>.<p class="Briefhead">ವಿದ್ಯಾರ್ಥಿ ಸಾವು</p>.<p>ಶಹಾಬಾದ್ (ಕಲಬುರಗಿ ಜಿಲ್ಲೆ): ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಕಾಗಿಣಾ ನದಿಯಲ್ಲಿ ಈಜಲು ಹೋದ ಇಲ್ಲಿನ ಹನುಮಾನ ನಗರದ ನಿವಾಸಿ ವೆಂಕಟೇಶ (16) ಮೃತಪಟ್ಟಿದ್ದಾನೆ. </p>.<p>ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿ ಬಾಲಕನ ಮೃತದೇಹವನ್ನು ಶಹಾಬಾದ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಅವರ ತಂದೆ–ತಾಯಿ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>