ಇದೇ ಶೈಕ್ಷಣಿಕ ವರ್ಷದಿಂದ ಪಾಠಶಾಲೆಯು ಕಾರ್ಯಾರಂಭ ಮಾಡಲಿದೆ. ಈಗಾಗಲೇ ಐದು ವಿದ್ಯಾರ್ಥಿಗಳು ಪ್ರವೇಶ ಕೋರಿ ನೋಂದಣಿ ಮಾಡಿಸಿದ್ದಾರೆ. ನಾಡಿನ ಸಂಸ್ಕೃತಿ, ಆಚಾರ, ವಿಚಾರಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಈ ಪಾಠ ಶಾಲೆಯು ತುಂಬಾ ಮಹತ್ವದ್ದಾಗಿದೆ. ವಿದ್ಯಾಪೀಠ ಆರಂಭಕ್ಕೆ ವಿಪ್ರರು ದೇಣಿಗೆ ಕೊಡಬೇಕಾದ ಅಗತ್ಯವಿಲ್ಲ. ಆದರೆ, ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.