<p><strong>ರಾಯಚೂರು:</strong>ಸಂಸ್ಕೃತ ಅಧ್ಯಯನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಯಚೂರಿನಲ್ಲಿ ಅತಿ ಶೀಘ್ರದಲ್ಲೆ ಸಂಸ್ಕೃತ ವಿದ್ಯಾಪೀಠ ಸ್ಥಾಪಿಸಲಾಗುವುದು ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.</p>.<p>ನಗರದ ಶ್ರೀ ರಾಘವೇಂದ್ರ ಮಠದಲ್ಲಿ ಮಂಗಳವಾರ ಆಯೋಜಿಸಿದ್ದ ವಿಪ್ರ ಬಾಂಧವರ ಸಭೆಯಲ್ಲಿ ಮಾತನಾಡಿದರು.</p>.<p>ಇದೇ ಶೈಕ್ಷಣಿಕ ವರ್ಷದಿಂದ ಪಾಠಶಾಲೆಯು ಕಾರ್ಯಾರಂಭ ಮಾಡಲಿದೆ. ಈಗಾಗಲೇ ಐದು ವಿದ್ಯಾರ್ಥಿಗಳು ಪ್ರವೇಶ ಕೋರಿ ನೋಂದಣಿ ಮಾಡಿಸಿದ್ದಾರೆ. ನಾಡಿನ ಸಂಸ್ಕೃತಿ, ಆಚಾರ, ವಿಚಾರಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಈ ಪಾಠ ಶಾಲೆಯು ತುಂಬಾ ಮಹತ್ವದ್ದಾಗಿದೆ. ವಿದ್ಯಾಪೀಠ ಆರಂಭಕ್ಕೆ ವಿಪ್ರರು ದೇಣಿಗೆ ಕೊಡಬೇಕಾದ ಅಗತ್ಯವಿಲ್ಲ. ಆದರೆ, ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ವಿಪ್ರ ಬಾಂಧವರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong>ಸಂಸ್ಕೃತ ಅಧ್ಯಯನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಯಚೂರಿನಲ್ಲಿ ಅತಿ ಶೀಘ್ರದಲ್ಲೆ ಸಂಸ್ಕೃತ ವಿದ್ಯಾಪೀಠ ಸ್ಥಾಪಿಸಲಾಗುವುದು ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.</p>.<p>ನಗರದ ಶ್ರೀ ರಾಘವೇಂದ್ರ ಮಠದಲ್ಲಿ ಮಂಗಳವಾರ ಆಯೋಜಿಸಿದ್ದ ವಿಪ್ರ ಬಾಂಧವರ ಸಭೆಯಲ್ಲಿ ಮಾತನಾಡಿದರು.</p>.<p>ಇದೇ ಶೈಕ್ಷಣಿಕ ವರ್ಷದಿಂದ ಪಾಠಶಾಲೆಯು ಕಾರ್ಯಾರಂಭ ಮಾಡಲಿದೆ. ಈಗಾಗಲೇ ಐದು ವಿದ್ಯಾರ್ಥಿಗಳು ಪ್ರವೇಶ ಕೋರಿ ನೋಂದಣಿ ಮಾಡಿಸಿದ್ದಾರೆ. ನಾಡಿನ ಸಂಸ್ಕೃತಿ, ಆಚಾರ, ವಿಚಾರಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಈ ಪಾಠ ಶಾಲೆಯು ತುಂಬಾ ಮಹತ್ವದ್ದಾಗಿದೆ. ವಿದ್ಯಾಪೀಠ ಆರಂಭಕ್ಕೆ ವಿಪ್ರರು ದೇಣಿಗೆ ಕೊಡಬೇಕಾದ ಅಗತ್ಯವಿಲ್ಲ. ಆದರೆ, ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ವಿಪ್ರ ಬಾಂಧವರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>