ನೀರು ಜಲವಲ್ಲ ಅದು ಜೀವದ ಸೆಲೆ. ವಿಶ್ವದಲ್ಲಿ 1993ರಲ್ಲಿ ಪ್ರಥಮ ಬಾರಿಗೆ ವಿಶ್ವ ಜಲ ದಿನ ಆಚರಿಸಲಾಯಿತು. ಆ ಮೂಲಕ ಜಲ ಸಂರಕ್ಷಣೆ, ಜಲ ಸಾಕ್ಷರತೆ, ಜಲ ಪ್ರಜ್ಞೆ ಮತ್ತು ಹಸಿರೀಕರಣ ಮಾಡುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲಾಡಳಿತದಿಂದ ಜಲ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲಾಗುತ್ತಿದೆ. ರಾಜಸ್ಥಾನದ ನಂತರ ಕರ್ನಾಟಕ ಬರ ಪೀಡಿತ ರಾಜ್ಯವಾಗಿದ್ದು, ನೀರಿನ ಸಮಸ್ಯೆ ಇದೆ. ಜನರಿಗೆ ನೀರಿನ ಬಗ್ಗೆ ಅರಿವು ನೀಡುವ ಮೂಲಕ ಜಲ ಸಂರಕ್ಷಣೆಗೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.