ಮೆರವಣಿಗೆ: ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಬಸವ ವೃತ್ತದಿಂದ ಸವಿತಾ ಸಮಾಜದ ಕಾಲೊನಿವರೆಗೆ ಸವಿತಾ ಮಹರ್ಷಿ ಭಾವಚಿತ್ರ ಮೆರವಣಿಗೆ ನಡೆಯಿತು. ಮಾಜಿ ಶಾಸಕ ಜಿ.ಹಂಪಯ್ಯ ನಾಯಕ, ಮುಖಂಡರಾದ ರಾಜಾ ರಾಮಚಂದ್ರ ನಾಯಕ, ಶರಣಯ್ಯ ಕೆ.ಗುಡದಿನ್ನಿ, ಸವಿತಾ ಸಮಾಜದ ಅಧ್ಯಕ್ಷ ರಾಘವೇಂದ್ರ ಉಂದ್ಯಾಲ, ಜಿ.ಉಮಾಪತಿ ಹಾಗೂ ಇತರ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.