ದೇವದುರ್ಗ: ‘ಸಾವಿತ್ರಿಬಾಯಿ ಫುಲೆ ಅವರು ದೇಶದಲ್ಲಿ ಮಹಿಳಾ ಶಿಕ್ಷಣದ ಕ್ರಾಂತಿ ಜ್ಯೋತಿಯಾಗಿದ್ದಾರೆ’ ಎಂದು ಹೂಗಾರ ಸಮಾಜ ತಾಲ್ಲೂಕು ಅಧ್ಯಕ್ಷ ಮಲ್ಲಣ್ಣ ಮುಂಡರಗಿ ಹೇಳಿದರು.
ಪಟ್ಟಣದ ಎಪಿಎಂಸಿ ಹತ್ತಿರದ ಜ್ಯೋತಿಬಾ ಫುಲೆ ವೃತ್ತದಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಂಆರ್ಎಸ್ಎಚ್ ರಾಜ್ಯ ಘಟಕದ ಅಧ್ಯಕ್ಷ ಶಿವರಾಯ ಅಕ್ಕರಕಿ ಮಾತನಾಡಿ, ‘ಮಹಿಳೆ ನಾಲ್ಕು ಗೋಡೆಗಳಿಂದ ಹೊರಬಂದು ವಿದ್ಯೆ ಕಲಿಯುವುದು ಅಪರಾಧವಲ್ಲ ಎನ್ನುವುದನ್ನು ಗಟ್ಟಿ ದನಿಯಲ್ಲಿ ತಿಳಿಸಿದವರು ಫುಲೆ’ ಎಂದರು.