‘ಎಸ್ಸಿ–ಎಸ್ಟಿ ನೋಂದಾಯಿತ ಗುತ್ತಿಗೆದಾರರು ವಿವಿಧ ಇಲಾಖೆಯ ಕಾಮಗಾರಿಗಳನ್ನು ನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ. ಜಿಲ್ಲೆಯ ಗುತ್ತಿಗೆದಾರರು ಸಭೆ ಉದ್ದೇಶಿಸಿ ಮಾತನಾಡಿ, ಕೆಲ ಕಾಮಗಾರಿಗಳಲ್ಲಿ ರಾಜಕೀಯ ಹಸ್ತಕ್ಷೇಪವಾಗುತ್ತಿದ್ದು ಪ್ರಥಮ ದರ್ಜೆ ಗುತ್ತಿಗೆದಾರರು ನಾಲ್ಕನೇ ದರ್ಜೆ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ. ಈ ಕುರಿತು ಹಿರಿಯ ಅಧಿಕಾರಿಗಳಿಗೆ ಗಮನಕ್ಕೆ ತಂದರೆ, ಮುಂದಿನ ಕಾಮಗಾರಿ ನಮಗೆ ದೊರೆಯುವುದಿಲ್ಲ ಎನ್ನುವ ಭಯ ನಮ್ಮನ್ನು ಕಾಡುತ್ತಿದೆ’ ಗುತ್ತಿಗೆದಾರರು ಅಸಮಾಧಾನ ವ್ಯಕ್ತಪಡಿಸಿದರು.