ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಆರಂಭ

Last Updated 28 ಜೂನ್ 2022, 11:32 IST
ಅಕ್ಷರ ಗಾತ್ರ

ಕವಿತಾಳ: ನನೆಗುದಿಗೆ ಬಿದ್ದಿದ್ದ ಸಿರವಾರ ತಾಲ್ಲೂಕಿನ ಬಾಗಲವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಸೋಮವಾರ ಆರಂಭವಾಯಿತು.

6 ತಿಂಗಳುಗಳಿಂದ ಕಾಮಗಾರಿ ಸ್ಥಗಿತಗೊಂಡ ಕಾರಣ ಕೊಠಡಿಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿತ್ತು. ಈ ಕುರಿತು ‘ಪ್ರಜಾವಾಣಿ’ಯ ಜೂನ್‍ 21ರ ಸಂಚಿಕೆಯಲ್ಲಿ ‘ಕೊಠಡಿ ಕೊರತೆ ವರಾಂಡದಲ್ಲಿ ಮಕ್ಕಳಿಗೆ ಪಾಠ’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ವರದಿ ಗಮನಿಸಿದ ಅಧಿಕಾರಿಗಳು ಕಾಮಗಾರಿ ಆರಂಭಕ್ಕೆ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

‘ಪತ್ರಿಕೆಯಲ್ಲಿ ವರದಿ ಪ್ರಕಟವಾದ ಕಾರಣ ಕಾಮಗಾರಿ ಆರಂಭವಾಗಿದೆ’ ಎಂದು ಮುಖ್ಯಶಿಕ್ಷಕ ಹನುಮಂತಪ್ಪ ನಾಯಕ ಮತ್ತು ಸಂಘಟನೆಯ ಮುಖಂಡ ನಾಗರಾಜ ಹಿಂದಿನಮನಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT