ಸಾಲಗುಂದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ಅಭ್ಯಾಸ ಮಾಡುವ ರೋಸನಿಬಿ ಆರನಬಾಷಾ, ಸಹನಾ ಮಹಿಬೂಬಸಾಬ ಎಂಬ ಎರಡು ಮಕ್ಕಳ ಕಾಲುಗಳು ಮುರಿದಿವೆ. ಚಾಲಕ ಬಸ್ ಬಿಟ್ಟು ಓಡಿ ಹೋಗಿದ್ದಾನೆ. ಮಕ್ಕಳ ಚೀರಾಟ ನೋಡಿದ ಗ್ರಾಮಸ್ಥರು ತಕ್ಷಣ ಅಂಬುಲೆನ್ಸ್ಗೆ ಕರೆ ಮಾಡಿ ನಗರದ ಶಾಂತಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಮಕ್ಕಳ ಸ್ಥಿತಿ ಕಂಡು ಪಾಲಕರು ಆಸ್ಪತ್ರೆಯಲ್ಲಿ ಕಣ್ಣೀರು ಹಾಕಿದರು.