<p><strong>ಲಿಂಗಸುಗೂರು:</strong> ತಾಲ್ಲೂಕಿನಾದ್ಯಂತ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಕಲಿಕಾ ಚೇತರಿಕೆ ಮತ್ತು ಮಳೆಬಿಲ್ಲು ವಿಶೇಷ ಕಾರ್ಯಕ್ರಮಗಳ ಮೂಲಕಸೋಮವಾರ ಅದ್ದೂರಿಯಾಗಿ ಆರಂಭವಾದವು.</p>.<p>ಪಟ್ಟಣ ಸೇರಿದಂತೆ ತಾಲ್ಲೂಕಿನ ಹುನಕುಂಟಿ, ಮಾವಿನಭಾವಿ, ಕಳ್ಳಿಲಿಂಗಸುಗೂರು, ಹನುಮಗುಡ್ಡ, ನವಲಿ, ನರಕಲದಿನ್ನಿ, ಚಿತ್ತಾಪುರ, ಆನೆಹೊಸೂರು, ಬೆಂಡೋಣಿ, ಸುಣಕಲ್ಲ, ಈಚನಾಳ, ಸರ್ಜಾಪುರ, ಯರಡೋಣಿ ಸೇರಿದಂತೆ ಇತರೆಡೆ ಹಬ್ಬದ ವಾತಾವರಣ ಕಂಡುಬಂತು.</p>.<p>ಶಾಲಾ ಸಿಬ್ಬಂದಿ ಶಾಲೆಗಳ ಮುಖ್ಯದ್ವಾರಗಳಿಗೆ ತಳಿರು ತೋರಣ ಕಟ್ಟಿ, ಚಿತ್ತಾರದ ರಂಗೋಲಿ ಬಿಡಿಸಿ, ಮಕ್ಕಳಿಗೆ ಗುಲಾಬಿ ಹೂ, ಪಠ್ಯ ಪುಸ್ತಕ ವಿತರಿಸಿ ಸ್ವಾಗತಿಸಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ ಸುಧಾರಣ ಸಮಿತಿ ಸದಸ್ಯರು, ಶಿಕ್ಷಕರು ಮಕ್ಕಳನ್ನು ಮೊದಲ ದಿನ ಶಾಲೆಗೆ ಕರೆತರಲು ಪಾಲಕರಲ್ಲಿ ಜಾಗೃತಿ ಮೂಡಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ ಮಾತನಾಡಿ, ‘ಶಿಕ್ಷಕ ಸಮೂಹ ತಾಲ್ಲೂಕಿನಾದ್ಯಂತ ಸ್ಥಳೀಯ ಪ್ರತಿನಿಧಿಗಳ ಸಹಯೋಗದಲ್ಲಿ ಶಾಲೆಗಳ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ. ಮೊದಲ ದಿನ ಉತ್ತಮ ಸ್ಪಂದನೆ ದೊರೆತಿದೆ’ ಎಂದರು.</p>.<p><strong>ಮಕ್ಕಳಿಗೆ ಸಹಿ ನೀಡಿ ಸ್ವಾಗತ</strong></p>.<p><strong>ಮಸ್ಕಿ: </strong>ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ತರಗತಿಗಳು ಸೋಮವಾರದಿಂದ ಆರಂಭವಾಗಿದ್ದು ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳನ್ನು ಅದ್ದೂರಿಯಾಗಿ ಬರ ಮಾಡಿಕೊಳ್ಳಲಾಯಿತು.</p>.<p>ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಜೊಗೀನ್ ರಾಮಣ್ಣ ಸ್ಮಾರಕ ಪ್ರೌಢ ಶಾಲೆ, ಬಯ್ಯಾಪೂರ ಮಹಾಂತಮ್ಮ ಲಿಂಗನಗೌಡ ಪ್ರಾಥಮಿಕ ಶಾಲೆ ಸೇರಿದಂತೆ ಹಲವು ಶಾಲೆಗಳ ಆಡಳಿತ ಮಂಡಳಿ ತರಗತಿ ಬಂದ ವಿದ್ಯಾರ್ಥಿಗಳಿಗೆ ಹೂವು ಹಾಗೂ ಸಿಹಿ ನೀಡಿ ಸ್ವಾಗತಿಸಿದರು.</p>.<p>ನರಸಗೌಡ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆ, ಸರಸ್ವತಿ ವಿದ್ಯಾನಿಕೇತನ ಶಾಲೆ, ವೀರಶೈವ ವಿದ್ಯಾವರ್ಧಕ ಸಂಘ ಸೇರಿದಂತೆ ವಿವಿಧ ಖಾಸಗಿ ಶಿಕ್ಷಣ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸಂಭ್ರಮ ಕಂಡುಬಂತು.</p>.<p>ಶಾಲೆಗಳ ಮುಂದೆ ರಂಗೋಲಿ ಹಾಕಿ ಅಲಂಕಾರ ಮಾಡಲಾಗಿತ್ತು. ಕೆಲವು ಕಡೆ ಟೆಂಗಿನ ಗರಿ, ತಳೀರು ತೋರಣಗಳನ್ನು ಕಟ್ಟಿದ್ದು<br />ಗಮನಸೆಳೆಯಿತು.</p>.<p><strong>ಸಿಹಿ ಬಿಸಿಯೂಟ</strong></p>.<p><strong>ಸಿರವಾರ: </strong>ಈ ಶೈಕ್ಷಣಿಕ ವರ್ಷದ ಶಾಲಾ ಆರಂಭೋತ್ಸವವನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ಹೂ, ಸಿಹಿ ನೀಡುವ ಮೂಲಕ ಸೋಮವಾರ<br />ಸ್ವಾಗತಿಸಿದರು.</p>.<p>ತರಗತಿಗೆ ಬಂದ ವಿದ್ಯಾರ್ಥಿಗಳು ಉತ್ಸಾಹದಿಂದ ಶಿಕ್ಷಕರೊಂದಿಗೆ ಪಾಲ್ಗೊಂಡರು.</p>.<p>ಶಾಲೆಗಳನ್ನು ತೆಂಗಿನ ಗರಿ, ಮಾವಿನ ಎಲೆ, ಹೂವಿನಿಂದ ಅಲಂಕಾರ ಮಾಡಲಾಗಿತ್ತು. ಮಧ್ಯಾಹ್ನ ಬಿಸಿಯೂಟದ ಜತೆಗೆ ಸಿಹಿ ತಿನಿಸನ್ನು ಮಕ್ಕಳು ಶಿಕ್ಷಕರ ಸವಿದರು.</p>.<p>ಹಳ್ಳಿಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಶಾಲೆಗೆ ಬಂದದ್ದು, ಪಟ್ಟಣ ಪ್ರದೇಶಗಳಲ್ಲಿ ಸಂಖ್ಯೆ ಗಣನೀಯವಾಗಿ ಕಡಿಮೆ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ತಾಲ್ಲೂಕಿನಾದ್ಯಂತ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಕಲಿಕಾ ಚೇತರಿಕೆ ಮತ್ತು ಮಳೆಬಿಲ್ಲು ವಿಶೇಷ ಕಾರ್ಯಕ್ರಮಗಳ ಮೂಲಕಸೋಮವಾರ ಅದ್ದೂರಿಯಾಗಿ ಆರಂಭವಾದವು.</p>.<p>ಪಟ್ಟಣ ಸೇರಿದಂತೆ ತಾಲ್ಲೂಕಿನ ಹುನಕುಂಟಿ, ಮಾವಿನಭಾವಿ, ಕಳ್ಳಿಲಿಂಗಸುಗೂರು, ಹನುಮಗುಡ್ಡ, ನವಲಿ, ನರಕಲದಿನ್ನಿ, ಚಿತ್ತಾಪುರ, ಆನೆಹೊಸೂರು, ಬೆಂಡೋಣಿ, ಸುಣಕಲ್ಲ, ಈಚನಾಳ, ಸರ್ಜಾಪುರ, ಯರಡೋಣಿ ಸೇರಿದಂತೆ ಇತರೆಡೆ ಹಬ್ಬದ ವಾತಾವರಣ ಕಂಡುಬಂತು.</p>.<p>ಶಾಲಾ ಸಿಬ್ಬಂದಿ ಶಾಲೆಗಳ ಮುಖ್ಯದ್ವಾರಗಳಿಗೆ ತಳಿರು ತೋರಣ ಕಟ್ಟಿ, ಚಿತ್ತಾರದ ರಂಗೋಲಿ ಬಿಡಿಸಿ, ಮಕ್ಕಳಿಗೆ ಗುಲಾಬಿ ಹೂ, ಪಠ್ಯ ಪುಸ್ತಕ ವಿತರಿಸಿ ಸ್ವಾಗತಿಸಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ ಸುಧಾರಣ ಸಮಿತಿ ಸದಸ್ಯರು, ಶಿಕ್ಷಕರು ಮಕ್ಕಳನ್ನು ಮೊದಲ ದಿನ ಶಾಲೆಗೆ ಕರೆತರಲು ಪಾಲಕರಲ್ಲಿ ಜಾಗೃತಿ ಮೂಡಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ ಮಾತನಾಡಿ, ‘ಶಿಕ್ಷಕ ಸಮೂಹ ತಾಲ್ಲೂಕಿನಾದ್ಯಂತ ಸ್ಥಳೀಯ ಪ್ರತಿನಿಧಿಗಳ ಸಹಯೋಗದಲ್ಲಿ ಶಾಲೆಗಳ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ. ಮೊದಲ ದಿನ ಉತ್ತಮ ಸ್ಪಂದನೆ ದೊರೆತಿದೆ’ ಎಂದರು.</p>.<p><strong>ಮಕ್ಕಳಿಗೆ ಸಹಿ ನೀಡಿ ಸ್ವಾಗತ</strong></p>.<p><strong>ಮಸ್ಕಿ: </strong>ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ತರಗತಿಗಳು ಸೋಮವಾರದಿಂದ ಆರಂಭವಾಗಿದ್ದು ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳನ್ನು ಅದ್ದೂರಿಯಾಗಿ ಬರ ಮಾಡಿಕೊಳ್ಳಲಾಯಿತು.</p>.<p>ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಜೊಗೀನ್ ರಾಮಣ್ಣ ಸ್ಮಾರಕ ಪ್ರೌಢ ಶಾಲೆ, ಬಯ್ಯಾಪೂರ ಮಹಾಂತಮ್ಮ ಲಿಂಗನಗೌಡ ಪ್ರಾಥಮಿಕ ಶಾಲೆ ಸೇರಿದಂತೆ ಹಲವು ಶಾಲೆಗಳ ಆಡಳಿತ ಮಂಡಳಿ ತರಗತಿ ಬಂದ ವಿದ್ಯಾರ್ಥಿಗಳಿಗೆ ಹೂವು ಹಾಗೂ ಸಿಹಿ ನೀಡಿ ಸ್ವಾಗತಿಸಿದರು.</p>.<p>ನರಸಗೌಡ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆ, ಸರಸ್ವತಿ ವಿದ್ಯಾನಿಕೇತನ ಶಾಲೆ, ವೀರಶೈವ ವಿದ್ಯಾವರ್ಧಕ ಸಂಘ ಸೇರಿದಂತೆ ವಿವಿಧ ಖಾಸಗಿ ಶಿಕ್ಷಣ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸಂಭ್ರಮ ಕಂಡುಬಂತು.</p>.<p>ಶಾಲೆಗಳ ಮುಂದೆ ರಂಗೋಲಿ ಹಾಕಿ ಅಲಂಕಾರ ಮಾಡಲಾಗಿತ್ತು. ಕೆಲವು ಕಡೆ ಟೆಂಗಿನ ಗರಿ, ತಳೀರು ತೋರಣಗಳನ್ನು ಕಟ್ಟಿದ್ದು<br />ಗಮನಸೆಳೆಯಿತು.</p>.<p><strong>ಸಿಹಿ ಬಿಸಿಯೂಟ</strong></p>.<p><strong>ಸಿರವಾರ: </strong>ಈ ಶೈಕ್ಷಣಿಕ ವರ್ಷದ ಶಾಲಾ ಆರಂಭೋತ್ಸವವನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ಹೂ, ಸಿಹಿ ನೀಡುವ ಮೂಲಕ ಸೋಮವಾರ<br />ಸ್ವಾಗತಿಸಿದರು.</p>.<p>ತರಗತಿಗೆ ಬಂದ ವಿದ್ಯಾರ್ಥಿಗಳು ಉತ್ಸಾಹದಿಂದ ಶಿಕ್ಷಕರೊಂದಿಗೆ ಪಾಲ್ಗೊಂಡರು.</p>.<p>ಶಾಲೆಗಳನ್ನು ತೆಂಗಿನ ಗರಿ, ಮಾವಿನ ಎಲೆ, ಹೂವಿನಿಂದ ಅಲಂಕಾರ ಮಾಡಲಾಗಿತ್ತು. ಮಧ್ಯಾಹ್ನ ಬಿಸಿಯೂಟದ ಜತೆಗೆ ಸಿಹಿ ತಿನಿಸನ್ನು ಮಕ್ಕಳು ಶಿಕ್ಷಕರ ಸವಿದರು.</p>.<p>ಹಳ್ಳಿಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಶಾಲೆಗೆ ಬಂದದ್ದು, ಪಟ್ಟಣ ಪ್ರದೇಶಗಳಲ್ಲಿ ಸಂಖ್ಯೆ ಗಣನೀಯವಾಗಿ ಕಡಿಮೆ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>