<p><strong>ದೇವದುರ್ಗ</strong>: ಅರಕೇರ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಪಿಎಂ ಶ್ರೀ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ತಸ್ಲಿಂ ಉನ್ನಿಸಾ ಬೇಗಂ ಅವರು ಶಾಲಾ ಶಿಕ್ಷಣ ಇಲಾಖೆಯ ನಿಯಮ ಉಲ್ಲಂಘಿಸಿ, ಶಾಲೆಯಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.</p>.<p>ಶಾಲಾ ಆವರಣದಲ್ಲಿ ಹುಟ್ಟುಹಬ್ಬದ ಆಚರಣೆ, ಕೇಕ್ ಕತ್ತರಿಸುವುದು, ಸಿಹಿ ಹಂಚುವುದನ್ನು ನಿಷೇಧಿಸಿ ಶಾಲಾ ಶಿಕ್ಷಣ ಇಲಾಖೆ ಈ ಹಿಂದೆ ಆದೇಶ ಹೊರಡಿಸಿದೆ. </p>.<p>ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಸೇರಿಸಿ ಕೇಕ್ ಕತ್ತರಿಸಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.</p>.<p>‘ಮುಖ್ಯಶಿಕ್ಷಕಿ, ಇತರ ಸಿಬ್ಬಂದಿಗೆ ಮಾದರಿಯಾಗಿರಬೇಕು. ನಿಷೇಧವಿದ್ದರೂ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವುದು ಅನಾಥ ಮತ್ತು ಬಡ ಮಕ್ಕಳ ಕಲಿಕೆ ಮೇಲೆ ಪರಿಣಾಮ ಬೀರುತ್ತದೆ. ಇಲಾಖೆ ಅವರನ್ನು ಅಮಾನತು ಮಾಡಿ ಈ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಿ’ ಎಂದು ಶಿಕ್ಷಣ ಪ್ರೇಮಿ ಹನುಮಂತ್ರಾಯ ಒತ್ತಾಯಿಸಿದರು.</p>.<p>‘ಸರ್ಕಾರಿ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆಯನ್ನು ಇಲಾಖೆ ನಿಷೇಧಿಸಿದೆ. ಮುಖ್ಯಶಿಕ್ಷಕಿ ನಿಯಮ ತಿಳಿದವರು. ನಿಯಮ ಉಲ್ಲಂಘಿಸಿರುವುದು ಸರಿಯಲ್ಲ. ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇನೆ’ ಎಂದು ಬಿಇಒ ಮಲ್ಲಿಕಾರ್ಜುನ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ</strong>: ಅರಕೇರ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಪಿಎಂ ಶ್ರೀ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ತಸ್ಲಿಂ ಉನ್ನಿಸಾ ಬೇಗಂ ಅವರು ಶಾಲಾ ಶಿಕ್ಷಣ ಇಲಾಖೆಯ ನಿಯಮ ಉಲ್ಲಂಘಿಸಿ, ಶಾಲೆಯಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.</p>.<p>ಶಾಲಾ ಆವರಣದಲ್ಲಿ ಹುಟ್ಟುಹಬ್ಬದ ಆಚರಣೆ, ಕೇಕ್ ಕತ್ತರಿಸುವುದು, ಸಿಹಿ ಹಂಚುವುದನ್ನು ನಿಷೇಧಿಸಿ ಶಾಲಾ ಶಿಕ್ಷಣ ಇಲಾಖೆ ಈ ಹಿಂದೆ ಆದೇಶ ಹೊರಡಿಸಿದೆ. </p>.<p>ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಸೇರಿಸಿ ಕೇಕ್ ಕತ್ತರಿಸಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.</p>.<p>‘ಮುಖ್ಯಶಿಕ್ಷಕಿ, ಇತರ ಸಿಬ್ಬಂದಿಗೆ ಮಾದರಿಯಾಗಿರಬೇಕು. ನಿಷೇಧವಿದ್ದರೂ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವುದು ಅನಾಥ ಮತ್ತು ಬಡ ಮಕ್ಕಳ ಕಲಿಕೆ ಮೇಲೆ ಪರಿಣಾಮ ಬೀರುತ್ತದೆ. ಇಲಾಖೆ ಅವರನ್ನು ಅಮಾನತು ಮಾಡಿ ಈ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಿ’ ಎಂದು ಶಿಕ್ಷಣ ಪ್ರೇಮಿ ಹನುಮಂತ್ರಾಯ ಒತ್ತಾಯಿಸಿದರು.</p>.<p>‘ಸರ್ಕಾರಿ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆಯನ್ನು ಇಲಾಖೆ ನಿಷೇಧಿಸಿದೆ. ಮುಖ್ಯಶಿಕ್ಷಕಿ ನಿಯಮ ತಿಳಿದವರು. ನಿಯಮ ಉಲ್ಲಂಘಿಸಿರುವುದು ಸರಿಯಲ್ಲ. ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇನೆ’ ಎಂದು ಬಿಇಒ ಮಲ್ಲಿಕಾರ್ಜುನ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>