<p><strong>ರಾಯಚೂರು:</strong> ‘ದೇಶದ ಮಹಾಗ್ರಂಥಗಳಾದ ಮಹಾಭಾರತ ಮತ್ತು ರಾಮಾಯಣದಲ್ಲೂ ವೈಜ್ಞಾನಿಕ ಅಂಶಗಳನ್ನು ಉಲ್ಲೇಖಿಸಲಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಜಂಟಿ ನಿರ್ದೇಶಕ ಎಂ. ವಿಜಯಕುಮಾರ ಹೇಳಿದರು.</p>.<p>ಯರಮರಸ್ ಕ್ಯಾಂಪ್ನ ಆಪ್ತಾಬ್ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾ ಶಿಕ್ಷಣ ಸಂಸ್ಥೆ ಮತ್ತು ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಕಲಬುರಗಿ ವಿಭಾಗ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶ್ರೀ ಕೃಷ್ಣನು ಚಕ್ರವ್ಯೂಹ ಭೇದಿಸುವ ಕಥೆಯನ್ನು ಹೇಳುತ್ತಿದ್ದಾಗ ಸಹೋದರಿ ಸುಭದ್ರೆ ನಿದ್ರೆಯಲ್ಲಿದ್ದರೂ, ಗರ್ಭದಲ್ಲಿರುವ ಶಿಶು ಕಥೆಯನ್ನು ಕೇಳುತ್ತಿತ್ತು. ಸುಭದ್ರೆ ನಿದ್ರೆಗೆ ಜಾರಿದ ನಂತರ ಪ್ರತಿಕ್ರಿಯಿಸತೊಡಗಿತು ಎನ್ನುವ ಉಲ್ಲೇಖವಿದೆ’ ಎಂದು ಹೇಳಿದರು.</p>.<p>‘ಮಕ್ಕಳಿಗೆ ಸ್ಪರ್ಧೆಯ ಅರ್ಥವನ್ನು ವಿವರಿಸಿ ಗೆದ್ದವರು ಸೋತವರಿಗೆ ಅಭಿನಂದನೆಗಳನ್ನು ಸಲ್ಲಿಸಬೇಕು. ಏಕೆಂದರೆ ನಿಮ್ಮ ಗೆಲುವಿನಲ್ಲಿ ಅವರ ತ್ಯಾಗವಿದೆ. ಅದೇ ರೀತಿ ಸೋತವರು ಗೆದ್ದವರಿಗೆ ರಾಜ್ಯ ಮಟ್ಟದಲ್ಲಿ ನಮ್ಮ ಕಲಬುರಗಿ ವಿಭಾಗವನ್ನು ಪ್ರಥಮ ಸ್ಥಾನದಲ್ಲಿ ಬರುವಂತೆ ಶುಭಕೋರಬೇಕು’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಡಯಟ್ ಪ್ರಾಚಾರ್ಯ ಚಂದ್ರಶೇಖರ ಭಂಡಾರಿ ಮಾತನಾಡಿ, ‘ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮಾನವ ಕುಲದ ಒಳಿತಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಬಳಸಿಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>ಮುಖಂಡ ಆರ್ಡಿಎ ನಿಕಟ ಪೂರ್ವ ಸದಸ್ಯ ಗೋವಿಂದ ರೆಡ್ಡಿ ಮಾತನಾಡಿದರು. ಆಪ್ತಾಬ್ ಸಂಸ್ಥೆಯ ಅಧ್ಯಕ್ಷ ಸಿರಾಜ್ ತಮ್ಮ ಅನುಭವ ಹಂಚಿಕೊಂಡರು.</p>.<p>ನಾಟಕ ಸ್ಪರ್ಧೆಯ ನಿರ್ಣಾಯಕರಾಗಿ ಮರ್ಚಡ್ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೀರೇಂದ್ರ ಪಾಟೀಲ, ಮಲ್ಕಾಪುರ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಂಗಮೇಶ ಕೋಟೆ ಭಾಗವಹಿಸಿದ್ದರು.</p>.<p>ನೋಡಲ್ ಅಧಿಕಾರಿ ಮುರಳೀಧರರಾವ ಕುಲಕರ್ಣಿ, ಗದ್ದಿ ಬಸಪ್ಪ ಹಾಗೂ ಡಯಟ್ ಉಪನ್ಯಾಸಕಿ ಸುಜಾತಾ ಹಾಜರಿದ್ದರು. ಶಿಕ್ಷಣ ಸಂಯೋಜಕ ಮಂಜುನಾಥ ಹಾಗೂ ಕೋದಂಡ ರೆಡ್ಡಿ ನಿರೂಪಿಸಿದರು. ಶಿಕ್ಷಕಿ ಸಾಜೀದ್ ಫಾತಿಮಾ ವಂದಿಸಿದರು.</p>.<p>ಸ್ಪರ್ಧೆಯಲ್ಲಿ ಕಲಬುರಗಿ ವಿಭಾಗದ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು, ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ನಾಟಕ ತಂಡಗಳು ಹಾಗೂ ಮಾರ್ಗದರ್ಶಿ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ದೇಶದ ಮಹಾಗ್ರಂಥಗಳಾದ ಮಹಾಭಾರತ ಮತ್ತು ರಾಮಾಯಣದಲ್ಲೂ ವೈಜ್ಞಾನಿಕ ಅಂಶಗಳನ್ನು ಉಲ್ಲೇಖಿಸಲಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಜಂಟಿ ನಿರ್ದೇಶಕ ಎಂ. ವಿಜಯಕುಮಾರ ಹೇಳಿದರು.</p>.<p>ಯರಮರಸ್ ಕ್ಯಾಂಪ್ನ ಆಪ್ತಾಬ್ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾ ಶಿಕ್ಷಣ ಸಂಸ್ಥೆ ಮತ್ತು ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಕಲಬುರಗಿ ವಿಭಾಗ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶ್ರೀ ಕೃಷ್ಣನು ಚಕ್ರವ್ಯೂಹ ಭೇದಿಸುವ ಕಥೆಯನ್ನು ಹೇಳುತ್ತಿದ್ದಾಗ ಸಹೋದರಿ ಸುಭದ್ರೆ ನಿದ್ರೆಯಲ್ಲಿದ್ದರೂ, ಗರ್ಭದಲ್ಲಿರುವ ಶಿಶು ಕಥೆಯನ್ನು ಕೇಳುತ್ತಿತ್ತು. ಸುಭದ್ರೆ ನಿದ್ರೆಗೆ ಜಾರಿದ ನಂತರ ಪ್ರತಿಕ್ರಿಯಿಸತೊಡಗಿತು ಎನ್ನುವ ಉಲ್ಲೇಖವಿದೆ’ ಎಂದು ಹೇಳಿದರು.</p>.<p>‘ಮಕ್ಕಳಿಗೆ ಸ್ಪರ್ಧೆಯ ಅರ್ಥವನ್ನು ವಿವರಿಸಿ ಗೆದ್ದವರು ಸೋತವರಿಗೆ ಅಭಿನಂದನೆಗಳನ್ನು ಸಲ್ಲಿಸಬೇಕು. ಏಕೆಂದರೆ ನಿಮ್ಮ ಗೆಲುವಿನಲ್ಲಿ ಅವರ ತ್ಯಾಗವಿದೆ. ಅದೇ ರೀತಿ ಸೋತವರು ಗೆದ್ದವರಿಗೆ ರಾಜ್ಯ ಮಟ್ಟದಲ್ಲಿ ನಮ್ಮ ಕಲಬುರಗಿ ವಿಭಾಗವನ್ನು ಪ್ರಥಮ ಸ್ಥಾನದಲ್ಲಿ ಬರುವಂತೆ ಶುಭಕೋರಬೇಕು’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಡಯಟ್ ಪ್ರಾಚಾರ್ಯ ಚಂದ್ರಶೇಖರ ಭಂಡಾರಿ ಮಾತನಾಡಿ, ‘ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮಾನವ ಕುಲದ ಒಳಿತಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಬಳಸಿಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>ಮುಖಂಡ ಆರ್ಡಿಎ ನಿಕಟ ಪೂರ್ವ ಸದಸ್ಯ ಗೋವಿಂದ ರೆಡ್ಡಿ ಮಾತನಾಡಿದರು. ಆಪ್ತಾಬ್ ಸಂಸ್ಥೆಯ ಅಧ್ಯಕ್ಷ ಸಿರಾಜ್ ತಮ್ಮ ಅನುಭವ ಹಂಚಿಕೊಂಡರು.</p>.<p>ನಾಟಕ ಸ್ಪರ್ಧೆಯ ನಿರ್ಣಾಯಕರಾಗಿ ಮರ್ಚಡ್ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೀರೇಂದ್ರ ಪಾಟೀಲ, ಮಲ್ಕಾಪುರ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಂಗಮೇಶ ಕೋಟೆ ಭಾಗವಹಿಸಿದ್ದರು.</p>.<p>ನೋಡಲ್ ಅಧಿಕಾರಿ ಮುರಳೀಧರರಾವ ಕುಲಕರ್ಣಿ, ಗದ್ದಿ ಬಸಪ್ಪ ಹಾಗೂ ಡಯಟ್ ಉಪನ್ಯಾಸಕಿ ಸುಜಾತಾ ಹಾಜರಿದ್ದರು. ಶಿಕ್ಷಣ ಸಂಯೋಜಕ ಮಂಜುನಾಥ ಹಾಗೂ ಕೋದಂಡ ರೆಡ್ಡಿ ನಿರೂಪಿಸಿದರು. ಶಿಕ್ಷಕಿ ಸಾಜೀದ್ ಫಾತಿಮಾ ವಂದಿಸಿದರು.</p>.<p>ಸ್ಪರ್ಧೆಯಲ್ಲಿ ಕಲಬುರಗಿ ವಿಭಾಗದ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು, ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ನಾಟಕ ತಂಡಗಳು ಹಾಗೂ ಮಾರ್ಗದರ್ಶಿ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>