<p><strong>ರಾಯಚೂರು</strong>: ನಗರದಲ್ಲಿಪರಿಶಿಷ್ಟ ಜಾತಿ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಯೋಜನೆ (ಎಸ್ಸಿಪಿ, ಟಿಎಸ್ಪಿ)ಗಾಗಿ ಬಿಡುಗಡೆ ಆಗಿರುವ ಅನುದಾನ ಬಳಕೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ ಆಗಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ವಿರೂಪಾಕ್ಷಿ ಆರೋಪಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಯಮ ಉಲ್ಲಂಘನೆಗಾಗಿ ಶಾಸಕ ಡಾ.ಶಿವರಾಜ ಪಾಟೀಲ, ಜಿಲ್ಲಾಧಿಕಾರಿ, ಎಂಜಿನಿಯರುಗಳ ವಿರುದ್ಧ ದೂರು ಸಲ್ಲಿಸುವ ಬಗ್ಗೆ ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. ಶಾಸಕರು ತಮ್ಮ ರಾಜಕೀಯ ಪ್ರಭಾವದಿಂದ ಎಸ್ಸಿ–ಎಸ್ಟಿ ಗುತ್ತಿಗೆದಾರರ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ ಎಂದರು.</p>.<p>ವಿವಿಧ ಕಾಮಗಾರಿಗಳನ್ನು ವಹಿಸುವುದಕ್ಕೆ ಶಾಸಕ ಡಾ.ಶಿವರಾಜ ಪಾಟೀಲ ಕಮಿಷನ್ ಪಡೆಯುತ್ತಿರುವುದನ್ನು ಸಾಬೀತುಪಡಿಸಲು ಸಿದ್ಧನಿದ್ದೇನೆ. ಅದು ಸಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ? ಎಂದು ಸವಾಲು ಹಾಕಿದರು.</p>.<p>ನಗರೋತ್ಥಾನ, ಕೆಬಿಜೆಎನ್ಎಲ್, ವಿವೇಚನಾ ಅನುದಾನದ ಕಾಮಗಾರಿಗಳು ಸಮರ್ಪಕವಾಗಿ ನಡೆದಿಲ್ಲ. ಕಾಗಾರಿಗಳನ್ನು ನಿರ್ವಹಿಸದೆ ಹಣ ಪಡೆಯಲಾಗಿದೆ. ಸಹೋದರ ಮತ್ತು ಬೆಂಬಲಿಗರಿಗೆ ಉಪಗುತ್ತಿಗೆ ವಹಿಸುತ್ತಿದ್ದಾರೆ. ಕಾಮಗಾರಿಗಳನ್ನು ನಿರ್ವಹಿಸದ ಕಾರಣದಿಂದಲೇ ಈಚೆಗೆ ವಿವಿಧ ಬಡಾವಣೆಗಳ ಮನೆಗಳಿಗೆ ನೀರು ನುಗ್ಗುವುದಕ್ಕೆ ಕಾರಣವಾಗಿದೆ ಎಂದು ಹೇಳಿದರು.</p>.<p>ಮುಖಂಡರಾದ ಎಂ.ಪವನಕುಮಾರ್, ವಿಶ್ವನಾಥ ಪಟ್ಟಿ, ಆದಿರಾಜ, ರಾಮಕೃಷ್ಣ, ಅಕ್ಬರ್ ಹುಸೇನ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ನಗರದಲ್ಲಿಪರಿಶಿಷ್ಟ ಜಾತಿ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಯೋಜನೆ (ಎಸ್ಸಿಪಿ, ಟಿಎಸ್ಪಿ)ಗಾಗಿ ಬಿಡುಗಡೆ ಆಗಿರುವ ಅನುದಾನ ಬಳಕೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ ಆಗಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ವಿರೂಪಾಕ್ಷಿ ಆರೋಪಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಯಮ ಉಲ್ಲಂಘನೆಗಾಗಿ ಶಾಸಕ ಡಾ.ಶಿವರಾಜ ಪಾಟೀಲ, ಜಿಲ್ಲಾಧಿಕಾರಿ, ಎಂಜಿನಿಯರುಗಳ ವಿರುದ್ಧ ದೂರು ಸಲ್ಲಿಸುವ ಬಗ್ಗೆ ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. ಶಾಸಕರು ತಮ್ಮ ರಾಜಕೀಯ ಪ್ರಭಾವದಿಂದ ಎಸ್ಸಿ–ಎಸ್ಟಿ ಗುತ್ತಿಗೆದಾರರ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ ಎಂದರು.</p>.<p>ವಿವಿಧ ಕಾಮಗಾರಿಗಳನ್ನು ವಹಿಸುವುದಕ್ಕೆ ಶಾಸಕ ಡಾ.ಶಿವರಾಜ ಪಾಟೀಲ ಕಮಿಷನ್ ಪಡೆಯುತ್ತಿರುವುದನ್ನು ಸಾಬೀತುಪಡಿಸಲು ಸಿದ್ಧನಿದ್ದೇನೆ. ಅದು ಸಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ? ಎಂದು ಸವಾಲು ಹಾಕಿದರು.</p>.<p>ನಗರೋತ್ಥಾನ, ಕೆಬಿಜೆಎನ್ಎಲ್, ವಿವೇಚನಾ ಅನುದಾನದ ಕಾಮಗಾರಿಗಳು ಸಮರ್ಪಕವಾಗಿ ನಡೆದಿಲ್ಲ. ಕಾಗಾರಿಗಳನ್ನು ನಿರ್ವಹಿಸದೆ ಹಣ ಪಡೆಯಲಾಗಿದೆ. ಸಹೋದರ ಮತ್ತು ಬೆಂಬಲಿಗರಿಗೆ ಉಪಗುತ್ತಿಗೆ ವಹಿಸುತ್ತಿದ್ದಾರೆ. ಕಾಮಗಾರಿಗಳನ್ನು ನಿರ್ವಹಿಸದ ಕಾರಣದಿಂದಲೇ ಈಚೆಗೆ ವಿವಿಧ ಬಡಾವಣೆಗಳ ಮನೆಗಳಿಗೆ ನೀರು ನುಗ್ಗುವುದಕ್ಕೆ ಕಾರಣವಾಗಿದೆ ಎಂದು ಹೇಳಿದರು.</p>.<p>ಮುಖಂಡರಾದ ಎಂ.ಪವನಕುಮಾರ್, ವಿಶ್ವನಾಥ ಪಟ್ಟಿ, ಆದಿರಾಜ, ರಾಮಕೃಷ್ಣ, ಅಕ್ಬರ್ ಹುಸೇನ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>