<p><strong>ರಾಯಚೂರು</strong>: ಉದ್ಯಮ ಆರಂಭಿಸುವುದಕ್ಕೆ ಎಲ್ಲಾ ರೀತಿಯ ಮಾಹಿತಿ ತಿಳಿದುಕೊಂಡು ಸ್ವಯಂ ಉದ್ಯಮ ಪ್ರಾರಂಭಿಸಿ, ಆರ್ಥಿಕ ಅಭಿವೃದ್ಧಿ ಸಾಧಿಸಬೇಕು ಎಂದು ಸಿಡಾಕ್ ಜಂಟಿ ನಿರ್ದೇಶಕ ಬಿ.ಎಂ.ಗೂಟೂರ ಅವರು ಮಹಿಳೆಯರಿಗೆ ಕರೆ ನೀಡಿದರು.</p>.<p>ನಗರದ ಕನ್ನಡ ಭವನದಲ್ಲಿ ಧಾರವಾಡದ ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಬೆಂಗಳೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀತೆ, ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಏರ್ಪಡಿಸಿರುವ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾವಂತರು ಸ್ವಯಂ ಉದ್ಯೋಗ ಪ್ರಾರಂಭಿಸಲು ಮುಂದೆ ಬರಬೇಕು. ಕೈಗಾರಿಕಾ ಮತ್ತು ಸೇವಾ ವಿಭಾಗದಲ್ಲಿ ಉದ್ಯಮ ಪ್ರಾರಂಭಿಸಲು ಅನೇಕ ಅವಕಾಶಗಳಿವೆ. ದೇಶದಲ್ಲಿ ಯುವಜನರು ಹೆಚ್ಚಿನ ಸಂಖೆಯಲ್ಲಿದ್ದು, ಸಣ್ಣ ಪ್ರಮಾಣದ ಉತ್ಪಾದನಾ ಚಟುವಟಿಕೆ ಮತ್ತು ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಹೆಚ್ಚಿನ ಅವಕಾಶವಿದೆ ಎಂದು ಹೇಳಿದರು.</p>.<p>ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ ಮಾತನಾಡಿ, ಸರ್ಕಾರಗಳಿಂದ ಹಲವಾರು ಯೋಜನೆಗಳು ಜಾರಿಗೆ ಬಂದಿದ್ದು, ಅವುಗಳನ್ನು ಸರಿಯಾಗಿ ಬಳಸಿಕೊಂಡು ಆಸಕ್ತಿಯಿಂದ ಉದ್ಯೋಗ ಪ್ರಾರಂಭಿಸಬೇಕು. ಇದಕ್ಕೆ ಬೇಕಾಗುವ ಎಲ್ಲಾ ರೀತಿಯ ಸಹಕಾರವನ್ನು ಸಂಬಂಧಿಸಿದ ಇಲಾಖೆಗಳಿಂದ ಒದಗಿಸಲಾಗುತ್ತದೆ ಎಂದು ಹೇಳಿದರು.</p>.<p>ರಾಯಚೂರಿನ ಎಸ್.ಬಿ.ಐ ಬ್ಯಾಂಕ್ ಮುಖ್ಯ ವ್ಯವಸ್ಥಾಪಕಿ ರಾಜೇಶ್ವರಿ ಅವರು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಈ ಸೌಲಭ್ಯವನ್ನು ಪಡೆಯಬೇಕು. ಇದಕ್ಕಾಗಿ ವಿವಿಧ ಬ್ಯಾಂಕುಗಳು ಸಾಲ ನೀಡಲು ಮುಂದೆ ಬರುತ್ತಿವೆ. ಆಸಕ್ತರು ಬ್ಯಾಂಕ್ ನೆರವಿನೊಂದಿಗೆ ಸ್ವಯಂ ಉದ್ಯೋಗ ಪ್ರಾರಂಭ ಮಾಡಬೇಕು ಎಂದು ತಿಳಿಸಿದರು.</p>.<p>ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ್ ಪ್ರಾಸ್ತಾವಿಕವಾಗಿ ಮಾತನಾಡಿ, 10 ದಿನಗಳ ತರಬೇತಿ ಅವಧಿಯಲ್ಲಿ ಸಾಧನಾ ಪ್ರೇರಣಾ ತರಬೇತಿ, ಸ್ವಯಂ ಉದ್ಯಮಗಳ ಸ್ಥಾಪನೆ ಮಾಡುವ ವಿಧಾನ, ಸ್ವಯಂ ಉದ್ಯೋಗಕ್ಕೆ ಇರುವ ಸೌಲಭ್ಯಗಳ ಕುರಿತು ತಿಳಿಸಲಾಗುವುದು ಎಂದು ಮಹಿಳೆಯರಿಗೆ ಹೇಳಿದರು.</p>.<p>ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ರಾಯಣ್ಣ ಕೆ., ರಾಷ್ಟ್ರೀಯ ತರಬೇತುದಾರರಾದ ಬಸವರಾಜ, ಸಿಡಾಕ್ ತರಬೇತುದಾರ ನಾಗರಾಜ್, ಶೃತಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಉದ್ಯಮ ಆರಂಭಿಸುವುದಕ್ಕೆ ಎಲ್ಲಾ ರೀತಿಯ ಮಾಹಿತಿ ತಿಳಿದುಕೊಂಡು ಸ್ವಯಂ ಉದ್ಯಮ ಪ್ರಾರಂಭಿಸಿ, ಆರ್ಥಿಕ ಅಭಿವೃದ್ಧಿ ಸಾಧಿಸಬೇಕು ಎಂದು ಸಿಡಾಕ್ ಜಂಟಿ ನಿರ್ದೇಶಕ ಬಿ.ಎಂ.ಗೂಟೂರ ಅವರು ಮಹಿಳೆಯರಿಗೆ ಕರೆ ನೀಡಿದರು.</p>.<p>ನಗರದ ಕನ್ನಡ ಭವನದಲ್ಲಿ ಧಾರವಾಡದ ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಬೆಂಗಳೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀತೆ, ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಏರ್ಪಡಿಸಿರುವ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾವಂತರು ಸ್ವಯಂ ಉದ್ಯೋಗ ಪ್ರಾರಂಭಿಸಲು ಮುಂದೆ ಬರಬೇಕು. ಕೈಗಾರಿಕಾ ಮತ್ತು ಸೇವಾ ವಿಭಾಗದಲ್ಲಿ ಉದ್ಯಮ ಪ್ರಾರಂಭಿಸಲು ಅನೇಕ ಅವಕಾಶಗಳಿವೆ. ದೇಶದಲ್ಲಿ ಯುವಜನರು ಹೆಚ್ಚಿನ ಸಂಖೆಯಲ್ಲಿದ್ದು, ಸಣ್ಣ ಪ್ರಮಾಣದ ಉತ್ಪಾದನಾ ಚಟುವಟಿಕೆ ಮತ್ತು ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಹೆಚ್ಚಿನ ಅವಕಾಶವಿದೆ ಎಂದು ಹೇಳಿದರು.</p>.<p>ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ ಮಾತನಾಡಿ, ಸರ್ಕಾರಗಳಿಂದ ಹಲವಾರು ಯೋಜನೆಗಳು ಜಾರಿಗೆ ಬಂದಿದ್ದು, ಅವುಗಳನ್ನು ಸರಿಯಾಗಿ ಬಳಸಿಕೊಂಡು ಆಸಕ್ತಿಯಿಂದ ಉದ್ಯೋಗ ಪ್ರಾರಂಭಿಸಬೇಕು. ಇದಕ್ಕೆ ಬೇಕಾಗುವ ಎಲ್ಲಾ ರೀತಿಯ ಸಹಕಾರವನ್ನು ಸಂಬಂಧಿಸಿದ ಇಲಾಖೆಗಳಿಂದ ಒದಗಿಸಲಾಗುತ್ತದೆ ಎಂದು ಹೇಳಿದರು.</p>.<p>ರಾಯಚೂರಿನ ಎಸ್.ಬಿ.ಐ ಬ್ಯಾಂಕ್ ಮುಖ್ಯ ವ್ಯವಸ್ಥಾಪಕಿ ರಾಜೇಶ್ವರಿ ಅವರು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಈ ಸೌಲಭ್ಯವನ್ನು ಪಡೆಯಬೇಕು. ಇದಕ್ಕಾಗಿ ವಿವಿಧ ಬ್ಯಾಂಕುಗಳು ಸಾಲ ನೀಡಲು ಮುಂದೆ ಬರುತ್ತಿವೆ. ಆಸಕ್ತರು ಬ್ಯಾಂಕ್ ನೆರವಿನೊಂದಿಗೆ ಸ್ವಯಂ ಉದ್ಯೋಗ ಪ್ರಾರಂಭ ಮಾಡಬೇಕು ಎಂದು ತಿಳಿಸಿದರು.</p>.<p>ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ್ ಪ್ರಾಸ್ತಾವಿಕವಾಗಿ ಮಾತನಾಡಿ, 10 ದಿನಗಳ ತರಬೇತಿ ಅವಧಿಯಲ್ಲಿ ಸಾಧನಾ ಪ್ರೇರಣಾ ತರಬೇತಿ, ಸ್ವಯಂ ಉದ್ಯಮಗಳ ಸ್ಥಾಪನೆ ಮಾಡುವ ವಿಧಾನ, ಸ್ವಯಂ ಉದ್ಯೋಗಕ್ಕೆ ಇರುವ ಸೌಲಭ್ಯಗಳ ಕುರಿತು ತಿಳಿಸಲಾಗುವುದು ಎಂದು ಮಹಿಳೆಯರಿಗೆ ಹೇಳಿದರು.</p>.<p>ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ರಾಯಣ್ಣ ಕೆ., ರಾಷ್ಟ್ರೀಯ ತರಬೇತುದಾರರಾದ ಬಸವರಾಜ, ಸಿಡಾಕ್ ತರಬೇತುದಾರ ನಾಗರಾಜ್, ಶೃತಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>