<p><strong>ಮಸ್ಕಿ:</strong> 'ಮಹಿಳೆಯರು ಸ್ವಸಹಾಯ ಗುಂಪುಗಳನ್ನು ರಚಿಸಿಕೊಂಡು ಸರ್ಕಾರದಿಂದ ದೊರೆಯುವ ಸಹಾಯದಿಂದ ಸ್ವಉದ್ಯೋಗ ಆರಂಭಿಸಿ ಸ್ವಾವಲಂಬಿ ಜೀವನ ಸಾಗಿಸಬೇಕು‘ ಎಂದು ರಾಚೋಟಿಯ ಚೆನ್ನಮಲ್ಲ ಸ್ವಾಮೀಜಿ ಕರೆ ನೀಡಿದರು.</p>.<p>ತಾಲ್ಲೂಕಿನ ಗುಂಡಾ ಗ್ರಾಮದಲ್ಲಿ ಬುಧವಾರ ಸ್ಪೂರ್ತಿ ಸಂಜೀವಿನಿ ಗ್ರಾಮ ಒಕ್ಕೂಟದಿಂದ ಏರ್ಪಡಿಸಿದ್ದ ಉನ್ನತಿ ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹಿಳೆಯರು, ಬಡ ಕೂಲಿ ಕಾರ್ಮಿಕರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತವೆ. ಆ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.</p>.<p>ಯೋಜನೆಯ ಮೇಲ್ವಿಚಾರಕ ಪ್ರಕಾಶ್ ನಾಯ್ಕ, ಸ್ಪೂರ್ತಿ ಸಂಜೀವಿನಿ ಒಕ್ಕೂಟದ ಅದ್ಯಕ್ಷೆ ಚಂದ್ರಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಕಣ್ಣೂರು, ಗೀರಿಜಾ, ಅಜಯ್, ಲಕ್ಷ್ಮೀ, ವಿಜಯಲಕ್ಷ್ಮೀ ಸೇರಿದಂತೆ ಇತರರು ಇದ್ದರು.</p>.<p>ಮಹಿಳೆಯರಿಗೆ ಹಪ್ಪಳ ಸೇರಿದಂತೆ ವಿವಿಧ ಪದಾರ್ಥಗಳನ್ನು ಸಿದ್ಧಪಡಿಸುವ ತರಬೇತಿ ನೀಡಲಾಯಿತು. ಅನೇಕ ಮಹಿಳೆಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> 'ಮಹಿಳೆಯರು ಸ್ವಸಹಾಯ ಗುಂಪುಗಳನ್ನು ರಚಿಸಿಕೊಂಡು ಸರ್ಕಾರದಿಂದ ದೊರೆಯುವ ಸಹಾಯದಿಂದ ಸ್ವಉದ್ಯೋಗ ಆರಂಭಿಸಿ ಸ್ವಾವಲಂಬಿ ಜೀವನ ಸಾಗಿಸಬೇಕು‘ ಎಂದು ರಾಚೋಟಿಯ ಚೆನ್ನಮಲ್ಲ ಸ್ವಾಮೀಜಿ ಕರೆ ನೀಡಿದರು.</p>.<p>ತಾಲ್ಲೂಕಿನ ಗುಂಡಾ ಗ್ರಾಮದಲ್ಲಿ ಬುಧವಾರ ಸ್ಪೂರ್ತಿ ಸಂಜೀವಿನಿ ಗ್ರಾಮ ಒಕ್ಕೂಟದಿಂದ ಏರ್ಪಡಿಸಿದ್ದ ಉನ್ನತಿ ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹಿಳೆಯರು, ಬಡ ಕೂಲಿ ಕಾರ್ಮಿಕರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತವೆ. ಆ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.</p>.<p>ಯೋಜನೆಯ ಮೇಲ್ವಿಚಾರಕ ಪ್ರಕಾಶ್ ನಾಯ್ಕ, ಸ್ಪೂರ್ತಿ ಸಂಜೀವಿನಿ ಒಕ್ಕೂಟದ ಅದ್ಯಕ್ಷೆ ಚಂದ್ರಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಕಣ್ಣೂರು, ಗೀರಿಜಾ, ಅಜಯ್, ಲಕ್ಷ್ಮೀ, ವಿಜಯಲಕ್ಷ್ಮೀ ಸೇರಿದಂತೆ ಇತರರು ಇದ್ದರು.</p>.<p>ಮಹಿಳೆಯರಿಗೆ ಹಪ್ಪಳ ಸೇರಿದಂತೆ ವಿವಿಧ ಪದಾರ್ಥಗಳನ್ನು ಸಿದ್ಧಪಡಿಸುವ ತರಬೇತಿ ನೀಡಲಾಯಿತು. ಅನೇಕ ಮಹಿಳೆಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>