ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾಲಾಲ್ ಮಹಾರಾಜ ಜಯಂತಿ ಸರಳ ಆಚರಣೆ

Last Updated 15 ಫೆಬ್ರುವರಿ 2021, 13:43 IST
ಅಕ್ಷರ ಗಾತ್ರ

ರಾಯಚೂರು: ಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತಿಯನ್ನು ನಗರದ ಪಂಡಿತ್‌ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಮಾರಂಭ ಆಯೋಜಿಸಲಾಗಿತ್ತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ವಿ. ನಾಯ್ಕ ಅವರು ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಮಾಲಾರ್ಪನೆ ಮಾಡಿ ನಮನ ಸಲ್ಲಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶಿಕ್ಷಣ ವಿಭಾಗದ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ್, ಬಂಜಾರಾ ಸಮಾಜದ ಮುಖಂಡರಾದ ನಾರಾಯಣ ನಾಯಕ, ಹನುಮಂತು ಚೌಹಾಣ್, ಶಿವಣ್ಣ ಪವಾರ್, ಶಂಕರ್ ನಾಯಕ, ರಂಗಮ್ಮ, ಜೀವಲಾಲ್ ನಾಯಕ, ಅಮರೇಶ ರಾಠೋಡ್, ನಾಗರೆಡ್ಡಿ ರಾಠೋಡ್, ಗೋವಿಂದ ರಾಠೋಡ್, ಕೃಷ್ಣ ನಾಯಕ, ಕಿಷ್ಟಪ್ಪ ಪವರ್ ಮತ್ತಿತರರು ಇದ್ದರು.

ರಾಯಚೂರು ಕೃಷಿ ವಿಶ್ವವಿದ್ಯಾಲಯ: ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಿಸಲಾಯಿತು.

ಕುಲಪತಿ ಡಾ.ಕೆ.ಎನ್. ಕಟ್ಟಿಮನಿ, ಶಿಕ್ಷಣ ನಿರ್ದೇಶಕ ಡಾ.ಎಂ.ಜಿ ಪಾಟೀಲ್ ಮತ್ತು ವ್ಯವಸ್ಥಾಪನಾ ಮಂಡಳಿಯ ಸದಸ್ಯರುಗಳು, ಅಧಿಕಾರಿಗಳು ಸಂತ ಸೇವಾಲಾಲರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ವ್ಯವಸ್ಥಾಪನಾ ಮಂಡಳಿಯ ಸದಸ್ಯ ತ್ರಿವಿಕ್ರಮ ಜೋಷಿ ಮಾತನಾಡಿದರು. ಕೊಟ್ರೇಶಪ್ಪ ಕೊರೆ ಅವರು ಸಂತ ಸೇವಾಲಾಲ ಅವರ ಜೀವನ ಚರಿತ್ರೆಯನ್ನು ತಿಳಿಸಿದರು. ಕುಲಪತಿ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT