<p><strong>ಕವಿತಾಳ:</strong>‘ಸರ್ಕಾರ ಸರ್ವರಿಗೂ ಉಚಿತವಾಗಿ ಕೊವಿಡ್ ಲಸಿಕೆ ನೀಡಬೇಕು. ಬಡ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸಬೇಕು’ ಎಂದು ಎಸ್ಎಫ್ಐ ರಾಜ್ಯ ಘಟಕದ ಉಪಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ ಆಗ್ರಹಿಸಿದರು.</p>.<p>ಎಸ್ಎಫ್ಐ ಪ್ರತಿಭಟನೆ ನಡೆಸಲು ಕರೆ ನೀಡಿದ ಕಾರಣ ಪಟ್ಟಣದಲ್ಲಿ ಶುಕ್ರವಾರ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ‘ಕೊವಿಡ್ ಸೋಂಕಿತರಿಗೆ ಆಕ್ಸಿಜನ್, ರೆಮ್ಡಿಸಿವಿರ್ ಚುಚ್ಚುಮದ್ದು, ವೆಂಟಿಲೇಟರ್ ಹಾಗೂ ಹಾಸಿಗೆ ಕೊರತೆಯಾಗದಂತೆ ಸರ್ಕಾರ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪರಿಸ್ಥಿತಿ ಉಲ್ಬಣಿಸಿದೆ. ಲಕ್ಷಾಂತರ ಜನರನ್ನು ಒಂದೆಡೆ ಸೇರಿಸಿ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿದ ರಾಜಕೀಯ ನಾಯಕರು ಇದೀಗ ಕೊರೊನಾ ನಿಯಂತ್ರಣ ನೆಪದಲ್ಲಿ ಲಾಕ್ಡೌನ್ ಮಾಡಿ ಬಡ ಕುಟುಂಬಗಳನ್ನು ಬೀದಿಗೆ ತಂದಿದ್ದಾರೆ’ ಎಂದು ಆರೋಪಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಲಿಂಗರಾಜ ಕಂದಗಲ್, ನಗರ ಘಟಕದ ಅಧ್ಯಕ್ಷ ಮೌನೇಶ ಬುಳ್ಳಾಪುರ, ಕಾರ್ಯದರ್ಶಿ ವೆಂಕಟೇಶ, ಮುಖಂಡರಾದ ನಾಗ್ ಮೋಹನ್ ಸಿಂಗ್, ಮಲ್ಲಿಕಾರ್ಜುನ, ಬಿ.ಗಣೇಶ ಮತ್ತು ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong>‘ಸರ್ಕಾರ ಸರ್ವರಿಗೂ ಉಚಿತವಾಗಿ ಕೊವಿಡ್ ಲಸಿಕೆ ನೀಡಬೇಕು. ಬಡ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸಬೇಕು’ ಎಂದು ಎಸ್ಎಫ್ಐ ರಾಜ್ಯ ಘಟಕದ ಉಪಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ ಆಗ್ರಹಿಸಿದರು.</p>.<p>ಎಸ್ಎಫ್ಐ ಪ್ರತಿಭಟನೆ ನಡೆಸಲು ಕರೆ ನೀಡಿದ ಕಾರಣ ಪಟ್ಟಣದಲ್ಲಿ ಶುಕ್ರವಾರ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ‘ಕೊವಿಡ್ ಸೋಂಕಿತರಿಗೆ ಆಕ್ಸಿಜನ್, ರೆಮ್ಡಿಸಿವಿರ್ ಚುಚ್ಚುಮದ್ದು, ವೆಂಟಿಲೇಟರ್ ಹಾಗೂ ಹಾಸಿಗೆ ಕೊರತೆಯಾಗದಂತೆ ಸರ್ಕಾರ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪರಿಸ್ಥಿತಿ ಉಲ್ಬಣಿಸಿದೆ. ಲಕ್ಷಾಂತರ ಜನರನ್ನು ಒಂದೆಡೆ ಸೇರಿಸಿ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿದ ರಾಜಕೀಯ ನಾಯಕರು ಇದೀಗ ಕೊರೊನಾ ನಿಯಂತ್ರಣ ನೆಪದಲ್ಲಿ ಲಾಕ್ಡೌನ್ ಮಾಡಿ ಬಡ ಕುಟುಂಬಗಳನ್ನು ಬೀದಿಗೆ ತಂದಿದ್ದಾರೆ’ ಎಂದು ಆರೋಪಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಲಿಂಗರಾಜ ಕಂದಗಲ್, ನಗರ ಘಟಕದ ಅಧ್ಯಕ್ಷ ಮೌನೇಶ ಬುಳ್ಳಾಪುರ, ಕಾರ್ಯದರ್ಶಿ ವೆಂಕಟೇಶ, ಮುಖಂಡರಾದ ನಾಗ್ ಮೋಹನ್ ಸಿಂಗ್, ಮಲ್ಲಿಕಾರ್ಜುನ, ಬಿ.ಗಣೇಶ ಮತ್ತು ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>