<p><strong>ಶಕ್ತಿನಗರ:</strong> ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಶಾಖವಾದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಹೇಳಿದರು.</p>.<p>ರಾಯಚೂರು ತಾಲ್ಲೂಕಿನ ಶಾಖವಾದಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ದಮ್ಮ ಆಂಜನೇಯ ಕೂಡ್ಲೂರು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪ್ರಸಕ್ತ ಸಾಲಿಗೆ ನರೇಗಾ ಯೋಜನೆಯಡಿ ₹60 ಲಕ್ಷ ಅನುದಾನ ಮಂಜೂರು ಆಗಿದೆ. ಹೆಚ್ಚು ಉದ್ಯೋಗ ಸೃಜಿಸಬೇಕು. ಕೆಲಸಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು. ರೇಷ್ಮೆ, ತೋಟಗಾರಿಕೆ, ಕೊಟ್ಟಿಗೆ ನಿರ್ಮಾಣಕ್ಕೆ ನೆರವು ನೀಡುವ ಅವಕಾಶವೂ ಈ ಯೋಜನೆಯಲ್ಲಿದೆ. ಹೂಳೆತ್ತುವುದು, ಶಾಲಾ ಮೈದಾನ ನಿರ್ಮಾಣ ಸೇರಿದಂತೆ ಇನ್ನಿತರ ವೈಯಕ್ತಿಕ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದೆ ಎಂದರು.</p>.<p>ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ದಾರಿದೀಪ, 15ನೇ ಹಣಕಾಸು ಯೋಜನೆ, ಭಾಗ್ಯಜ್ಯೋತಿ ಹಾಗೂ ಪ್ರಾಥಮಿಕ ಶಾಲಾ ಕೊಠಡಿ, ಬಿಸಿಯೂಟ ಸೇರಿದಂತೆ ಇನ್ನಿತರ ವಿಷಯಗಳನ್ನು ಚರ್ಚಿಸಲಾಯಿತು.</p>.<p>ಸಭೆಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಖಮರ್ ಬೇಗಂ, ಟಿ.ಎ.ರಂಜಿತ್, ಗ್ರಾ.ಪಂ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ:</strong> ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಶಾಖವಾದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಹೇಳಿದರು.</p>.<p>ರಾಯಚೂರು ತಾಲ್ಲೂಕಿನ ಶಾಖವಾದಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ದಮ್ಮ ಆಂಜನೇಯ ಕೂಡ್ಲೂರು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪ್ರಸಕ್ತ ಸಾಲಿಗೆ ನರೇಗಾ ಯೋಜನೆಯಡಿ ₹60 ಲಕ್ಷ ಅನುದಾನ ಮಂಜೂರು ಆಗಿದೆ. ಹೆಚ್ಚು ಉದ್ಯೋಗ ಸೃಜಿಸಬೇಕು. ಕೆಲಸಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು. ರೇಷ್ಮೆ, ತೋಟಗಾರಿಕೆ, ಕೊಟ್ಟಿಗೆ ನಿರ್ಮಾಣಕ್ಕೆ ನೆರವು ನೀಡುವ ಅವಕಾಶವೂ ಈ ಯೋಜನೆಯಲ್ಲಿದೆ. ಹೂಳೆತ್ತುವುದು, ಶಾಲಾ ಮೈದಾನ ನಿರ್ಮಾಣ ಸೇರಿದಂತೆ ಇನ್ನಿತರ ವೈಯಕ್ತಿಕ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದೆ ಎಂದರು.</p>.<p>ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ದಾರಿದೀಪ, 15ನೇ ಹಣಕಾಸು ಯೋಜನೆ, ಭಾಗ್ಯಜ್ಯೋತಿ ಹಾಗೂ ಪ್ರಾಥಮಿಕ ಶಾಲಾ ಕೊಠಡಿ, ಬಿಸಿಯೂಟ ಸೇರಿದಂತೆ ಇನ್ನಿತರ ವಿಷಯಗಳನ್ನು ಚರ್ಚಿಸಲಾಯಿತು.</p>.<p>ಸಭೆಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಖಮರ್ ಬೇಗಂ, ಟಿ.ಎ.ರಂಜಿತ್, ಗ್ರಾ.ಪಂ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>