ದಿನವಿಡೀ ಓಡಾಡುವ ಬೂದಿ ವಾಹನಗಳಿಂದ, ರಸ್ತೆಯ ಮೇಲೆ ಬೀಳುವ ಬೂದಿಯನ್ನು ಸ್ವಚ್ಛತೆ ಮಾಡದೆ ಹಾಗೇ ಬಿಡುವುದರಿಂದ ಶಕ್ತಿನಗರದಲ್ಲಿ ದೂಳು ಕಾಯಂ ಅತಿಥಿಯಂತಾಗಿ ಆವರಿಸಿಕೊಳ್ಳುತ್ತಿದೆ. ಭಾರಿ ವಾಹನ ಹೋದಾಗ ದಟ್ಟ ಅಲೆಯಾಗಿ ಚದುರುವ ದೂಳಿನ ಅರ್ಧದಷ್ಟು ಮತ್ತೆ ಅದೇ ಪ್ರದೇಶದಲ್ಲಿ ಕೂಡುತ್ತದೆ. ರಸ್ತೆ ದೂಳುಮಯವಾಗಿ ಹಾಳಾಗುತ್ತ ಹೋಗುತ್ತದೆ. ಪಾದಚಾರಿಗಳು, ವಾಹನ ಸವಾರರು, ಅಂಗಡಿಯವರು ದೂಳಿನ ಸಮಸ್ಯೆ ಎದುರಿಸುತ್ತಿದ್ದಾರೆ.