<p><strong>ಮಸ್ಕಿ:</strong> ಶಿವಕುಮಾರ ಸ್ವಾಮೀಜಿಯವರ 7ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬುಧವಾರ ಭಾವಚಿತ್ರದ ಮೆರವಣಿಗೆ ನಡೆಯಿತು.</p>.<p>ಸಂಜೆ 5ಕ್ಕೆ ದೈವದಕಟ್ಟೆ ಮೇಲೆ ಶಿವಕುಮಾರ ಸ್ವಾಮೀಜಿಯ ಭಾವಚಿತ್ರಕ್ಕೆ ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ಕನಕಗಿರಿ, ಮೆದಿಕಿನಾಳದ ಸುವರ್ಣಗಿರಿ ಸಂಸ್ಥಾನ ಮಠದ ಚೆನ್ನಮಲ್ಲ ಸ್ವಾಮೀಜಿ, ಇರಕಲ್ ಮಠದ ಬಸವಪ್ರಸಾದ ಶರಣರು ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅದ್ಯಕ್ಷ ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ತಹಶೀಲ್ದಾರ್ ಮಂಜುನಾಥ ಬೋಗಾವತಿ, ಮುಖಂಡ ಮಹಾದೇವಪ್ಪ ಗೌಡ ಪೊಲೀಸ್ ಪಾಟೀಲ, ಸಿಪಿಐ ರಾಮಪ್ಪ ವೈ.ಜಲಗೇರಿ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು. </p>.<p>ವಿಶೇಷವಾಗಿ ಅಲಂಕರಿಸಲಾಗಿದ್ದ ವಾಹನದಲ್ಲಿ ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಇಟ್ಟು ಮೆರವಣಿಗೆ ಮಾಡಲಾಯಿತು. ಅಗಸಿ, ಅಶೋಕ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಕನಕ ವೃತ್ತ, ತೇರು ಬೀದಿ ಮೂಲಕ ಸಾಗಿ ದೈವದ ಕಟ್ಟೆ ತಲುಪಿತು.</p>.<p>ಡೊಳ್ಳು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು. ಮುಖಂಡರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.</p>.<p>ವೀರೇಶ ಪಾಟೀಲ ಸ್ವಾಗತಿಸಿ, ನಿರೂಪಿಸಿದರು</p>.<p>ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ನಿಮಿತ್ತ ದೈವದಕಟ್ಟೆ ಮುಂಭಾಗದ ರಸ್ತೆಯಲ್ಲಿ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 5 ಸಾವಿರಕ್ಕೂ ಹೆಚ್ಚು ಜನ ದಾಸೋಹ ಸ್ವೀಕರಿಸಿದರು. ಬೂಂದಿ, ರೊಟ್ಟಿ, ಪಲ್ಲೆ, ಅನ್ನ–ಸಾರು, ಬಜ್ಜಿ ಸೇರಿದಂತೆ ವಿವಿಧ ಬಗೆಯ ಪ್ರಸಾದದ ವ್ಯವಸ್ಥೆಯನ್ನು ದೈವದಕಟ್ಟೆ ಬಳಗದ ಗೆಳೆಯರು ಭಕ್ತರ ಸಹಕಾರದಿಂದ ಮಾಡಿಸಿದ್ದು ವಿಶೇಷವಾಗಿತ್ತು.</p>. <h2>ದೈವದಕಟ್ಟೆ ಅಭಿವೃದ್ಧಿಗೆ ಅನುದಾನ: ಶಾಸಕ </h2><h2></h2><p>ಮಸ್ಕಿ ಪಟ್ಟಣದ ಪ್ರಮುಖ ಸ್ಥಳವಾದ ದೈವದಕಟ್ಟೆ ಅಭಿವೃದ್ಧಿಪಡಿಸಲು ಅನುದಾನ ನೀಡಲಾಗಿದೆ ಎಂದು ಶಾಸಕ ಆರ್.ಬಸನಗೌಡ ತಿಳಿಸಿದರು. ಕ್ಯಾಷುಟೆಕ್ ಸಂಸ್ಥೆಗೆ ನಿರ್ಮಾಣದ ಹೊಣೆ ವಹಿಸಲಾಗಿದ್ದು ಶೀಘ್ರ ಚಾಲನೆ ನೀಡಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ಶಿವಕುಮಾರ ಸ್ವಾಮೀಜಿಯವರ 7ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬುಧವಾರ ಭಾವಚಿತ್ರದ ಮೆರವಣಿಗೆ ನಡೆಯಿತು.</p>.<p>ಸಂಜೆ 5ಕ್ಕೆ ದೈವದಕಟ್ಟೆ ಮೇಲೆ ಶಿವಕುಮಾರ ಸ್ವಾಮೀಜಿಯ ಭಾವಚಿತ್ರಕ್ಕೆ ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ಕನಕಗಿರಿ, ಮೆದಿಕಿನಾಳದ ಸುವರ್ಣಗಿರಿ ಸಂಸ್ಥಾನ ಮಠದ ಚೆನ್ನಮಲ್ಲ ಸ್ವಾಮೀಜಿ, ಇರಕಲ್ ಮಠದ ಬಸವಪ್ರಸಾದ ಶರಣರು ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅದ್ಯಕ್ಷ ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ತಹಶೀಲ್ದಾರ್ ಮಂಜುನಾಥ ಬೋಗಾವತಿ, ಮುಖಂಡ ಮಹಾದೇವಪ್ಪ ಗೌಡ ಪೊಲೀಸ್ ಪಾಟೀಲ, ಸಿಪಿಐ ರಾಮಪ್ಪ ವೈ.ಜಲಗೇರಿ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು. </p>.<p>ವಿಶೇಷವಾಗಿ ಅಲಂಕರಿಸಲಾಗಿದ್ದ ವಾಹನದಲ್ಲಿ ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಇಟ್ಟು ಮೆರವಣಿಗೆ ಮಾಡಲಾಯಿತು. ಅಗಸಿ, ಅಶೋಕ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಕನಕ ವೃತ್ತ, ತೇರು ಬೀದಿ ಮೂಲಕ ಸಾಗಿ ದೈವದ ಕಟ್ಟೆ ತಲುಪಿತು.</p>.<p>ಡೊಳ್ಳು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು. ಮುಖಂಡರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.</p>.<p>ವೀರೇಶ ಪಾಟೀಲ ಸ್ವಾಗತಿಸಿ, ನಿರೂಪಿಸಿದರು</p>.<p>ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ನಿಮಿತ್ತ ದೈವದಕಟ್ಟೆ ಮುಂಭಾಗದ ರಸ್ತೆಯಲ್ಲಿ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 5 ಸಾವಿರಕ್ಕೂ ಹೆಚ್ಚು ಜನ ದಾಸೋಹ ಸ್ವೀಕರಿಸಿದರು. ಬೂಂದಿ, ರೊಟ್ಟಿ, ಪಲ್ಲೆ, ಅನ್ನ–ಸಾರು, ಬಜ್ಜಿ ಸೇರಿದಂತೆ ವಿವಿಧ ಬಗೆಯ ಪ್ರಸಾದದ ವ್ಯವಸ್ಥೆಯನ್ನು ದೈವದಕಟ್ಟೆ ಬಳಗದ ಗೆಳೆಯರು ಭಕ್ತರ ಸಹಕಾರದಿಂದ ಮಾಡಿಸಿದ್ದು ವಿಶೇಷವಾಗಿತ್ತು.</p>. <h2>ದೈವದಕಟ್ಟೆ ಅಭಿವೃದ್ಧಿಗೆ ಅನುದಾನ: ಶಾಸಕ </h2><h2></h2><p>ಮಸ್ಕಿ ಪಟ್ಟಣದ ಪ್ರಮುಖ ಸ್ಥಳವಾದ ದೈವದಕಟ್ಟೆ ಅಭಿವೃದ್ಧಿಪಡಿಸಲು ಅನುದಾನ ನೀಡಲಾಗಿದೆ ಎಂದು ಶಾಸಕ ಆರ್.ಬಸನಗೌಡ ತಿಳಿಸಿದರು. ಕ್ಯಾಷುಟೆಕ್ ಸಂಸ್ಥೆಗೆ ನಿರ್ಮಾಣದ ಹೊಣೆ ವಹಿಸಲಾಗಿದ್ದು ಶೀಘ್ರ ಚಾಲನೆ ನೀಡಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>