ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಏನೇ ಇದ್ದರೂ ಸತ್ಯಾಂಶ ಹೊರಬೇಕು. ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕಾನೂನು ಎಲ್ಲರಿಗೂ ಒಂದೇ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿರಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಬಾಲಕಿಯೂ ಇದ್ದು ಎಸ್.ಸಿ, ಎಸ್.ಟಿ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾದರೂ ಪೊಲೀಸರು ಆರೋಪಿ ಶ್ರೀಗಳಿಗೆ ಬಂಧಿಸದೇ ಆರು ದಿನದ ಬಳಿಕ ಬಂಧಿಸಿದ್ದಾರೆ. ಇದು ಕೆಟ್ಟ ಸಾಂಪ್ರದಾಯಕ್ಕೆ ನಾಂದಿ ಹಾಡಿದಂತಾಗಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಆರಂಭದಲ್ಲಿಯೇ ಮುರುಘಾ ಶರಣರ ಪರ ಹೇಳಿಕೆ ನೀಡಿದ್ದು ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಮುರುಘಾ ಮಠ ಹಾಗೂ ಮುರುಘಾ ಶಿವಮೂರ್ತಿ ಮುರುಘಾ ಶರಣರು ಪ್ರಭಾವಿಯಾಗಿದ್ದು ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು ಎಂದರು.