<p><strong>ರಾಯಚೂರು</strong>: ನಗರಸಭೆಯಿಂದ ಕುಡಿಯುವ ನೀರು ಸರಬರಾಜು, ಬೀದಿದೀಪ ನಿರ್ವಹಣೆ, ಸ್ವಚ್ಛತೆ ಕಾರ್ಯದಲ್ಲಿ ಗುತ್ತಿಗೆದಾರರುಹಾಗೂ ಅಧಿಕಾರಿಗಳ ನಡುವೆ ಸಮನ್ವಯತೆಯ ಕೊರತೆಯಿಂದಾಗಿ ಜನರಿಗೆ ಸಮಸ್ಯೆಯಾಗಿದೆ. ಅನೇಕ ಬಾರಿ ಸೂಚನೆ ನೀಡಿದರೂ ಯಾಕೆ ಸುಧಾರಣೆ ಆಗುತ್ತಿಲ್ಲ ಎಂದು ಶಾಸಕ ಡಾ. ಶಿವರಾಜ ಪಾಟೀಲ ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಬೀದಿ ದೀಪಗಳ ನಿರ್ವಹಣೆಯ ಗುತ್ತಿಗೆ ಪಡೆದ ಚೈತನ್ಯ ಎಲೆಕ್ಟ್ರಿಲ್ ಕಂಪನಿಗೆ ಉಪ ಗುತ್ತಿಗೆ ನೀಡಿದ್ದು, ಕಳಪೆ ಮಟ್ಟದ ವಿದ್ಯುತ್ ದೀಪ ಅಳವಡಿಕೆಯಾಗಿದೆ. ಕೂಡಲೇ ಉಪ ಗುತ್ತಿಗೆ ರದ್ದುಪಡಿಸಬೇಕು ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್ ಮಾತನಾಡಿ, ನಗರದ ಎಲ್ಲಾ 35 ವಾರ್ಡ್ಗಳ ಆರು ತಂಡಗಳನ್ನು ರಚಿಸಿ ಬೀದಿ ದೀಪಗಳ ನಿರ್ವಹಣೆಗೆ ಮುಂದಾಗಬೇಕು. ಕುಡಿಯುವ ನೀರಿನ ಪೈಪ್ ಲೈನ್ ಜೋಡಣೆ, ದುರಸ್ತಿ ಕಾರ್ಯಗಳು ತ್ವರಿತಗತಿಯಲ್ಲಿ ಮಾಡಬೇಕು.29 ಆಟೋ ಟಿಪ್ಪರ್, 2 ಜೆಸಿಬಿ ಹಾಗೂ ತಳ್ಳುಬಂಡಿಗಳ ಖರೀದಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಸ್ವಚ್ಛತಾ ಕಾರ್ಯಕ್ಕೆ 150 ಕಾರ್ಮಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಿದರು.</p>.<p>ಟಿಪ್ಪುಸುಲ್ತಾನ್, ಮಚ್ಚಿ ಬಜಾರ್ ರಸ್ತೆ ವಿಸ್ತರಣಾ ಕಾರ್ಯ, ನಗರದ ವಿವಿಧ ರಸ್ತೆಗಳ ದುರಸ್ತಿ, ಹೊಸರಸ್ತೆ ನಿರ್ಮಾಣ ಹಾಗೂ ಇತರೆ ವಿಷಯದ ಕುರಿತು ಚರ್ಚೆ ನಡೆಯಿತು.</p>.<p>ನಗರಸಭೆ ಅಧ್ಯಕ್ಷ ಈ.ವಿನಯಕುಮಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲರೆಡ್ಡಿ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮಹೇಂದ್ರಕುಮಾರ, ಪೌರಾಯುಕ್ತ ಮುನಿಸ್ವಾಮಿ, ಮಲ್ಲಿಕಾರ್ಜುನ ಗೋಪಿಶೇಟ್ಟಿ, ನಗರಸಭೆ ಸದಸ್ಯ ಎನ್.ಕೆ ನಾಗರಾಜ, ಶಶಿರಾಜ ಶ್ರಿನಿವಾಸ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ನಗರಸಭೆಯಿಂದ ಕುಡಿಯುವ ನೀರು ಸರಬರಾಜು, ಬೀದಿದೀಪ ನಿರ್ವಹಣೆ, ಸ್ವಚ್ಛತೆ ಕಾರ್ಯದಲ್ಲಿ ಗುತ್ತಿಗೆದಾರರುಹಾಗೂ ಅಧಿಕಾರಿಗಳ ನಡುವೆ ಸಮನ್ವಯತೆಯ ಕೊರತೆಯಿಂದಾಗಿ ಜನರಿಗೆ ಸಮಸ್ಯೆಯಾಗಿದೆ. ಅನೇಕ ಬಾರಿ ಸೂಚನೆ ನೀಡಿದರೂ ಯಾಕೆ ಸುಧಾರಣೆ ಆಗುತ್ತಿಲ್ಲ ಎಂದು ಶಾಸಕ ಡಾ. ಶಿವರಾಜ ಪಾಟೀಲ ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಬೀದಿ ದೀಪಗಳ ನಿರ್ವಹಣೆಯ ಗುತ್ತಿಗೆ ಪಡೆದ ಚೈತನ್ಯ ಎಲೆಕ್ಟ್ರಿಲ್ ಕಂಪನಿಗೆ ಉಪ ಗುತ್ತಿಗೆ ನೀಡಿದ್ದು, ಕಳಪೆ ಮಟ್ಟದ ವಿದ್ಯುತ್ ದೀಪ ಅಳವಡಿಕೆಯಾಗಿದೆ. ಕೂಡಲೇ ಉಪ ಗುತ್ತಿಗೆ ರದ್ದುಪಡಿಸಬೇಕು ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್ ಮಾತನಾಡಿ, ನಗರದ ಎಲ್ಲಾ 35 ವಾರ್ಡ್ಗಳ ಆರು ತಂಡಗಳನ್ನು ರಚಿಸಿ ಬೀದಿ ದೀಪಗಳ ನಿರ್ವಹಣೆಗೆ ಮುಂದಾಗಬೇಕು. ಕುಡಿಯುವ ನೀರಿನ ಪೈಪ್ ಲೈನ್ ಜೋಡಣೆ, ದುರಸ್ತಿ ಕಾರ್ಯಗಳು ತ್ವರಿತಗತಿಯಲ್ಲಿ ಮಾಡಬೇಕು.29 ಆಟೋ ಟಿಪ್ಪರ್, 2 ಜೆಸಿಬಿ ಹಾಗೂ ತಳ್ಳುಬಂಡಿಗಳ ಖರೀದಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಸ್ವಚ್ಛತಾ ಕಾರ್ಯಕ್ಕೆ 150 ಕಾರ್ಮಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಿದರು.</p>.<p>ಟಿಪ್ಪುಸುಲ್ತಾನ್, ಮಚ್ಚಿ ಬಜಾರ್ ರಸ್ತೆ ವಿಸ್ತರಣಾ ಕಾರ್ಯ, ನಗರದ ವಿವಿಧ ರಸ್ತೆಗಳ ದುರಸ್ತಿ, ಹೊಸರಸ್ತೆ ನಿರ್ಮಾಣ ಹಾಗೂ ಇತರೆ ವಿಷಯದ ಕುರಿತು ಚರ್ಚೆ ನಡೆಯಿತು.</p>.<p>ನಗರಸಭೆ ಅಧ್ಯಕ್ಷ ಈ.ವಿನಯಕುಮಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲರೆಡ್ಡಿ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮಹೇಂದ್ರಕುಮಾರ, ಪೌರಾಯುಕ್ತ ಮುನಿಸ್ವಾಮಿ, ಮಲ್ಲಿಕಾರ್ಜುನ ಗೋಪಿಶೇಟ್ಟಿ, ನಗರಸಭೆ ಸದಸ್ಯ ಎನ್.ಕೆ ನಾಗರಾಜ, ಶಶಿರಾಜ ಶ್ರಿನಿವಾಸ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>