ಶ್ರೀ ರಾಘವೇಂದ್ರ ಗುರುವೈಭವೋತ್ಸವ ಅಂಗವಾಗಿ ಮಾರ್ಚ್ 16ರಂದು ರಾಯರ ಜನ್ಮದಿನ ಆಚರಿಸಲಾಗುವುದು. ವಿಶೇಷ ಪೂಜೆ, ಅನ್ನದಾನ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮಾಡಲಾಗುವುದು. ಗ್ರಂಥಗಳ ಬಿಡುಗಡೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು’ ಎಂದು ಮಂತ್ರಾಲಯದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.