<p><strong>ತಿಂಥಣಿ ಬ್ರಿಜ್ಡ್ (ರಾಯಚೂರು ಜಿಲ್ಲೆ):</strong> ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (49) ಅವರು ಗುರುವಾರ ಬೆಳಗಿನ ಜಾವ ಹೃದಯಘಾತದಿಂದಾಗಿ ನಿಧನರಾಗಿದ್ದಾರೆ.</p><p>ಬೆಳಗಿನ ಜಾವ 3.40 ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಸ್ವಾಮೀಜಿ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ದಾಖಲು ಮಾಡುವುದರಲ್ಲಿ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ ಎಂದು ಪೀಠದ ಭಕ್ತರು ತಿಳಿಸಿದ್ದಾರೆ.</p><p>ತಿಂಥಣಿಯ ಕನಕ ಗುರು ಪೀಠದಲ್ಲಿಯೇ ಸ್ವಾಮೀಜಿ ಅಂತ್ಯಕ್ರಿಯೆ ನಡೆಸಲಾಗುವುದು. ಅಲ್ಲದೇ </p><p>ಹಾಲುಮತದ ಪದ್ಧತಿಯಂತೆ ಅಂತ್ಯಕ್ರಿಯೆ ಸಿದ್ಧತೆ ನಡೆಸಲಾಗಿದೆ ಎಂದು ಭಕ್ತರು ತಿಳಿಸಿದ್ದಾರೆ</p> <p>ಸಿದ್ದರಾಮಾನಂದ ಸ್ವಾಮೀಜಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಲಮರಹಳ್ಳಿಯವರು. ಮಹದೇವಯ್ಯ ಮತ್ತು ಜಯಮ್ಮ ದಂಪತಿಯ 2ನೇ ಪುತ್ರರು.</p><p>ಸಿದ್ದರಾಮನಂದ ಸ್ವಾಮೀಜಿಯ ಮೂಲ ಹೆಸರು ಮೋಹನ್ ಪ್ರದಾನ ಎಂದು ತಿಳಿದುಬಂದಿದೆ. </p><p>ಆಧ್ಯಾತ್ಮಿಕ ಹಸಿನಿಂದ 18ನೇ ವಯಸ್ಸಿಗೆ ಮನೆ ಬಿಟ್ಟು ಸಂಚಾರ ಮೊದಲು ಜೈನ, ಕ್ರೈಸ್ತ, ಬ್ರಹ್ಮಕುಮಾರಿ ಪಂಥಗಳ ಪ್ರಭಾವಕ್ಕೆ ಒಳಗಾಗಿದ್ದರು.</p><p>ಶರಣ ಸಾಹಿತ್ಯದ ಜೊತೆಗೆ ಎಲ್ಲಾ ಧರ್ಮಗಳ ಅಧ್ಯಯನ ಮಾಡಿದ ಸ್ವಾಮೀಜಿಗಳು ಚಿತ್ರದುರ್ಗದ ಮುರುಘಾಮಠದಲ್ಲಿ ಕೆಲ ಕಾಲ ಅಧ್ಯಯನ ಅ ಬಳಿಕ ನಾಲ್ಕು ವರ್ಷಗಳ ಕಾಲ ಸಿಂಧನೂರಿನಲ್ಲಿ ಸ್ವಾಮೀಜಿ ವಾಸ್ತವ್ಯ ಮಾಡಿದರು.</p><p>ನಂತರ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಹತ್ತಿರ 2011 ರಲ್ಲಿ ಕನಕಗುರು ಪೀಠಕ್ಕೆ ಬಂದ ಸಿದ್ದರಾಮನಂದಾ ಸ್ವಾಮೀಜಿ ಕಾಗಿನೆಲೆ ಕನಕ ಗುರುಪೀಠ ಸ್ಥಾಪನೆ ಮಾಡಿದರು.</p><p>ತಿಂಥಣಿ ಬ್ರಿಜ್ ನಲ್ಲಿ ಕಲಬುರಗಿ ವಿಭಾಗದ ಕನಕ ಗುರು ಪೀಠ ಪ್ರಾರಂಭಿಸಿ ಪ್ರತಿ ವರ್ಷ ಜನವರಿ 12,13,14 ಹಾಲುಮತ ಸಂಸ್ಕೃತಿ ವೈಭವ ನಡೆಸುತ್ತಿದ್ದರು. ಈ ವರ್ಷವೂ ಹಾಲುಮತ ಸಾಹಿತ್ಯ ಸಮ್ಮೇಳ ಹಮ್ಮಿಕೊಂಡು ಯಶಸ್ವಿಯಾಗಿ ಪೂರ್ಣಗೊಳಿಸಿದರು.</p><p>ಈ ಹಿಂದೆ ಪ್ರತಿ ವರ್ಷದ ಕಾರ್ಯಕ್ರಮಕ್ಕೆ ಸಿಎಂ ಸೇರಿದಂತೆ ರಾಜ್ಯದ ಬಹುತೇಕ ಗಣ್ಯರು ಆಹ್ವಾನಿಸಿ ಸನ್ಮಾನಿಸಿ ಗೌರವಿಸುವ ಕೆಲಸ ಮಾಡಿದ್ದರು. ಕನಕ ಪೀಠದಲ್ಲಿ ಪ್ರಾಥಮಿಕ ಶಾಲೆಯಿಂದ ಪಿಯುವರೆಗೂ ಶಿಕ್ಷಣ ನೀಡುವ ಕೆಲಸ ಸ್ವಾಮೀಜಿ ಮಾಡಿದ್ದಾರೆ. </p><p>ಶಾಲಾ ಮಕ್ಕಳಿಗೆ ಉಚಿತ ದಾಸೋಹದ ವ್ಯವಸ್ಥೆ ಕೂಡ ಮಾಡಿದ್ದರು. ಅಲ್ಲದೇ ಬಾಗಲಕೋಟೆ ಜಿಲ್ಲೆಯ ಗುಡೂರಿನಲ್ಲಿ ಪದವಿ ಕಾಲೇಜು ಮುದ್ದೇಬಿಹಾಳದಲ್ಲಿ ಪದವಿ ಕಾಲೇಜು ಕೊಪ್ಪಳ ಜಿಲ್ಲೆಯ ಹಾಲವರ್ತಿ ಹಾಗೂ ಕುಷ್ಟಗಿ ತಾಲ್ಲೂಕಿನ ಬಾದಿಮನಾಳದಲ್ಲಿ ಶಾಖಾಮಠ ಸ್ಥಾಪನೆ ಮಾಡಿದ್ದಾರೆ. </p><p>ಕನಕಗುರು ಪೀಠದಲ್ಲಿ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ, ರಕ್ತದಾನ ಆಯೋಜನೆ ಮಾಡಿದ್ದರು. ಸಾಹಿತ್ಯ, ಸಮಾಜಸೇವೆ ಮಾಡಿದ ಗಣ್ಯರಿಗೆ ಭಾಸ್ಕರ, ಕನಕರತ್ನ, ಸಿದ್ಧ ಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಂಥಣಿ ಬ್ರಿಜ್ಡ್ (ರಾಯಚೂರು ಜಿಲ್ಲೆ):</strong> ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (49) ಅವರು ಗುರುವಾರ ಬೆಳಗಿನ ಜಾವ ಹೃದಯಘಾತದಿಂದಾಗಿ ನಿಧನರಾಗಿದ್ದಾರೆ.</p><p>ಬೆಳಗಿನ ಜಾವ 3.40 ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಸ್ವಾಮೀಜಿ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ದಾಖಲು ಮಾಡುವುದರಲ್ಲಿ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ ಎಂದು ಪೀಠದ ಭಕ್ತರು ತಿಳಿಸಿದ್ದಾರೆ.</p><p>ತಿಂಥಣಿಯ ಕನಕ ಗುರು ಪೀಠದಲ್ಲಿಯೇ ಸ್ವಾಮೀಜಿ ಅಂತ್ಯಕ್ರಿಯೆ ನಡೆಸಲಾಗುವುದು. ಅಲ್ಲದೇ </p><p>ಹಾಲುಮತದ ಪದ್ಧತಿಯಂತೆ ಅಂತ್ಯಕ್ರಿಯೆ ಸಿದ್ಧತೆ ನಡೆಸಲಾಗಿದೆ ಎಂದು ಭಕ್ತರು ತಿಳಿಸಿದ್ದಾರೆ</p> <p>ಸಿದ್ದರಾಮಾನಂದ ಸ್ವಾಮೀಜಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಲಮರಹಳ್ಳಿಯವರು. ಮಹದೇವಯ್ಯ ಮತ್ತು ಜಯಮ್ಮ ದಂಪತಿಯ 2ನೇ ಪುತ್ರರು.</p><p>ಸಿದ್ದರಾಮನಂದ ಸ್ವಾಮೀಜಿಯ ಮೂಲ ಹೆಸರು ಮೋಹನ್ ಪ್ರದಾನ ಎಂದು ತಿಳಿದುಬಂದಿದೆ. </p><p>ಆಧ್ಯಾತ್ಮಿಕ ಹಸಿನಿಂದ 18ನೇ ವಯಸ್ಸಿಗೆ ಮನೆ ಬಿಟ್ಟು ಸಂಚಾರ ಮೊದಲು ಜೈನ, ಕ್ರೈಸ್ತ, ಬ್ರಹ್ಮಕುಮಾರಿ ಪಂಥಗಳ ಪ್ರಭಾವಕ್ಕೆ ಒಳಗಾಗಿದ್ದರು.</p><p>ಶರಣ ಸಾಹಿತ್ಯದ ಜೊತೆಗೆ ಎಲ್ಲಾ ಧರ್ಮಗಳ ಅಧ್ಯಯನ ಮಾಡಿದ ಸ್ವಾಮೀಜಿಗಳು ಚಿತ್ರದುರ್ಗದ ಮುರುಘಾಮಠದಲ್ಲಿ ಕೆಲ ಕಾಲ ಅಧ್ಯಯನ ಅ ಬಳಿಕ ನಾಲ್ಕು ವರ್ಷಗಳ ಕಾಲ ಸಿಂಧನೂರಿನಲ್ಲಿ ಸ್ವಾಮೀಜಿ ವಾಸ್ತವ್ಯ ಮಾಡಿದರು.</p><p>ನಂತರ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಹತ್ತಿರ 2011 ರಲ್ಲಿ ಕನಕಗುರು ಪೀಠಕ್ಕೆ ಬಂದ ಸಿದ್ದರಾಮನಂದಾ ಸ್ವಾಮೀಜಿ ಕಾಗಿನೆಲೆ ಕನಕ ಗುರುಪೀಠ ಸ್ಥಾಪನೆ ಮಾಡಿದರು.</p><p>ತಿಂಥಣಿ ಬ್ರಿಜ್ ನಲ್ಲಿ ಕಲಬುರಗಿ ವಿಭಾಗದ ಕನಕ ಗುರು ಪೀಠ ಪ್ರಾರಂಭಿಸಿ ಪ್ರತಿ ವರ್ಷ ಜನವರಿ 12,13,14 ಹಾಲುಮತ ಸಂಸ್ಕೃತಿ ವೈಭವ ನಡೆಸುತ್ತಿದ್ದರು. ಈ ವರ್ಷವೂ ಹಾಲುಮತ ಸಾಹಿತ್ಯ ಸಮ್ಮೇಳ ಹಮ್ಮಿಕೊಂಡು ಯಶಸ್ವಿಯಾಗಿ ಪೂರ್ಣಗೊಳಿಸಿದರು.</p><p>ಈ ಹಿಂದೆ ಪ್ರತಿ ವರ್ಷದ ಕಾರ್ಯಕ್ರಮಕ್ಕೆ ಸಿಎಂ ಸೇರಿದಂತೆ ರಾಜ್ಯದ ಬಹುತೇಕ ಗಣ್ಯರು ಆಹ್ವಾನಿಸಿ ಸನ್ಮಾನಿಸಿ ಗೌರವಿಸುವ ಕೆಲಸ ಮಾಡಿದ್ದರು. ಕನಕ ಪೀಠದಲ್ಲಿ ಪ್ರಾಥಮಿಕ ಶಾಲೆಯಿಂದ ಪಿಯುವರೆಗೂ ಶಿಕ್ಷಣ ನೀಡುವ ಕೆಲಸ ಸ್ವಾಮೀಜಿ ಮಾಡಿದ್ದಾರೆ. </p><p>ಶಾಲಾ ಮಕ್ಕಳಿಗೆ ಉಚಿತ ದಾಸೋಹದ ವ್ಯವಸ್ಥೆ ಕೂಡ ಮಾಡಿದ್ದರು. ಅಲ್ಲದೇ ಬಾಗಲಕೋಟೆ ಜಿಲ್ಲೆಯ ಗುಡೂರಿನಲ್ಲಿ ಪದವಿ ಕಾಲೇಜು ಮುದ್ದೇಬಿಹಾಳದಲ್ಲಿ ಪದವಿ ಕಾಲೇಜು ಕೊಪ್ಪಳ ಜಿಲ್ಲೆಯ ಹಾಲವರ್ತಿ ಹಾಗೂ ಕುಷ್ಟಗಿ ತಾಲ್ಲೂಕಿನ ಬಾದಿಮನಾಳದಲ್ಲಿ ಶಾಖಾಮಠ ಸ್ಥಾಪನೆ ಮಾಡಿದ್ದಾರೆ. </p><p>ಕನಕಗುರು ಪೀಠದಲ್ಲಿ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ, ರಕ್ತದಾನ ಆಯೋಜನೆ ಮಾಡಿದ್ದರು. ಸಾಹಿತ್ಯ, ಸಮಾಜಸೇವೆ ಮಾಡಿದ ಗಣ್ಯರಿಗೆ ಭಾಸ್ಕರ, ಕನಕರತ್ನ, ಸಿದ್ಧ ಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>