<p><strong>ಸಿಂಧನೂ</strong>ರು: ‘ತಾಲ್ಲೂಕು ವ್ಯಾಪ್ತಿಯಲ್ಲಿ 2024ರಿಂದ ಇಲ್ಲಿಯವರೆಗೆ ಅಬಕಾರಿ ಇಲಾಖೆಯಿಂದ ಒಟ್ಟು 517 ಪ್ರಕರಣಗಳನ್ನು ದಾಖಲಿಸಲಾಗಿದ್ದು, 11 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಕಚೇರಿಯ ಸರ್ಕಲ್ ಇನ್ಸ್ಪೆಕ್ಟರ್ ಗಂಗಾಧರ ಬಿ.ಬಡಿಗೇರ ತಿಳಿಸಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಸಿಂಧನೂರು ನಗರದಲ್ಲಿ 22, ಗ್ರಾಮೀಣ ಪ್ರದೇಶದಲ್ಲಿ 27 ಮದ್ಯದ ಅಂಗಡಿಗಳಿವೆ. ಇವುಗಳಲ್ಲಿ ಸಿಎಲ್-2 ಬೆಳಿಗ್ಗೆ 10 ರಿಂದ ರಾತ್ರಿ 10 ಗಂಟೆ, ಸಿಎಲ್-4, ಸಿಎಲ್-7 ಬೆಳಿಗ್ಗೆ 9ರಿಂದ ರಾತ್ರಿ 12 ಗಂಟೆ, ಎಂಎಸ್ಐಎಲ್ ಬೆಳಿಗ್ಗೆ 11ರಿಂದ ರಾತ್ರಿ 10 ಗಂಟೆಯವರೆಗೆ ತೆರೆಯಲು ಅವಕಾಶವಿದೆ. 2016ಕ್ಕಿಂತ ಪೂರ್ವದಲ್ಲಿ ಪರವಾನಗಿ ಪಡೆದ ಮದ್ಯದಂಗಡಿಗಳು ಶಾಲಾ-ಕಾಲೇಜು, ದೇವಸ್ಥಾನದಿಂದ 220 ಮೀಟರ್ ಅಂತರದಲ್ಲಿರಬೇಕೆಂಬ ನಿಯಮವಿದೆ’ ಎಂದರು.</p>.<p>‘2024ರಿಂದ 2026ರ ಮೇ ವರೆಗೆ ಮದ್ಯ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ 413 ಪ್ರಕರಣಗಳು ಹಾಗೂ ಅಬಕಾರಿ ಪರವಾನಗಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 104 ಪ್ರಕರಣಗಳು ದಾಖಲಾಗಿವೆ. 398 ಲೀಟರ್ ಮದ್ಯ, 136 ಲೀಟರ್ ಬಿಯರ್, 23 ಲೀಟರ್ ಸೇಂದಿ ವಶಪಡಿಸಿಕೊಳ್ಳಲಾಗಿದೆ. ₹10.46 ಲಕ್ಷ ದಂಡ ವಸೂಲಿ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ರೆಸ್ಟೋರೆಂಟ್ ಮತ್ತು ಸಾವಜಿ ಹೋಟೆಲ್ಗಳಲ್ಲಿ ಮದ್ಯ ಮಾರಾಟ ಮಾಡಲು ಪರವಾನಗಿ ಇಲ್ಲ. ಆದಾಗ್ಯೂ ಅನೇಕ ಕಡೆ ರಾಜಾರೋಷವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ನಮಸ್ಕಾರ ಶ್ರೀ ರೆಸ್ಟೋರೆಂಟ್ ಸೇರಿದಂತೆ ಅನೇಕ ಡಾಬಾ, ರೆಸ್ಟೋರೆಂಟ್ ಮತ್ತು ಸಾವಜಿ ಹೋಟೆಲ್ಗಳ ಮೇಲೆ ಕೇಸ್ ದಾಖಲಿಸಿ, ದಂಡ ವಿಧಿಸಲಾಗಿದೆ. ಪುನಃ ಮದ್ಯ ಮಾರಾಟ ಮಾಡಿದಲ್ಲಿ ಕಾನೂನು ಕ್ರಮ ಜರುಗಿಸಿ, ಬಂದ್ ಮಾಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ’ ಎಂದರು.</p>.<p>‘ಪ್ರಸ್ತುತ ಅಬಕಾರಿ ಕಚೇರಿಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್–2, ಹೆಡ್ ಕಾನ್ ಸ್ಟೆಬಲ್–2, ಕ್ಲರ್ಕ್–2, ಒಬ್ಬ ಚಾಲಕ ಸೇರಿ 7 ಜನ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಇನ್ನೂ 5 ಜನ ಕಾನ್ಸ್ಟೆಬಲ್ ಬೇಕು. ಈ ಬಗ್ಗೆ ಸರ್ಕಾರ ಕ್ರಮವಹಿಸಿ ಹುದ್ದೆಗಳ ಭರ್ತಿಗೆ ಮುಂದಾಗಬೇಕು. ಅಗತ್ಯ ಸಿಬ್ಬಂದಿಗಳಿದ್ದರೆ, ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಲು ಸಾಧ್ಯ’ ಎಂದು ಗಂಗಾಧರ ಬಿ.ಬಡಿಗೇರ ಅಭಿಪ್ರಾಯಪಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-32-1685630890</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂ</strong>ರು: ‘ತಾಲ್ಲೂಕು ವ್ಯಾಪ್ತಿಯಲ್ಲಿ 2024ರಿಂದ ಇಲ್ಲಿಯವರೆಗೆ ಅಬಕಾರಿ ಇಲಾಖೆಯಿಂದ ಒಟ್ಟು 517 ಪ್ರಕರಣಗಳನ್ನು ದಾಖಲಿಸಲಾಗಿದ್ದು, 11 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಕಚೇರಿಯ ಸರ್ಕಲ್ ಇನ್ಸ್ಪೆಕ್ಟರ್ ಗಂಗಾಧರ ಬಿ.ಬಡಿಗೇರ ತಿಳಿಸಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಸಿಂಧನೂರು ನಗರದಲ್ಲಿ 22, ಗ್ರಾಮೀಣ ಪ್ರದೇಶದಲ್ಲಿ 27 ಮದ್ಯದ ಅಂಗಡಿಗಳಿವೆ. ಇವುಗಳಲ್ಲಿ ಸಿಎಲ್-2 ಬೆಳಿಗ್ಗೆ 10 ರಿಂದ ರಾತ್ರಿ 10 ಗಂಟೆ, ಸಿಎಲ್-4, ಸಿಎಲ್-7 ಬೆಳಿಗ್ಗೆ 9ರಿಂದ ರಾತ್ರಿ 12 ಗಂಟೆ, ಎಂಎಸ್ಐಎಲ್ ಬೆಳಿಗ್ಗೆ 11ರಿಂದ ರಾತ್ರಿ 10 ಗಂಟೆಯವರೆಗೆ ತೆರೆಯಲು ಅವಕಾಶವಿದೆ. 2016ಕ್ಕಿಂತ ಪೂರ್ವದಲ್ಲಿ ಪರವಾನಗಿ ಪಡೆದ ಮದ್ಯದಂಗಡಿಗಳು ಶಾಲಾ-ಕಾಲೇಜು, ದೇವಸ್ಥಾನದಿಂದ 220 ಮೀಟರ್ ಅಂತರದಲ್ಲಿರಬೇಕೆಂಬ ನಿಯಮವಿದೆ’ ಎಂದರು.</p>.<p>‘2024ರಿಂದ 2026ರ ಮೇ ವರೆಗೆ ಮದ್ಯ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ 413 ಪ್ರಕರಣಗಳು ಹಾಗೂ ಅಬಕಾರಿ ಪರವಾನಗಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 104 ಪ್ರಕರಣಗಳು ದಾಖಲಾಗಿವೆ. 398 ಲೀಟರ್ ಮದ್ಯ, 136 ಲೀಟರ್ ಬಿಯರ್, 23 ಲೀಟರ್ ಸೇಂದಿ ವಶಪಡಿಸಿಕೊಳ್ಳಲಾಗಿದೆ. ₹10.46 ಲಕ್ಷ ದಂಡ ವಸೂಲಿ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ರೆಸ್ಟೋರೆಂಟ್ ಮತ್ತು ಸಾವಜಿ ಹೋಟೆಲ್ಗಳಲ್ಲಿ ಮದ್ಯ ಮಾರಾಟ ಮಾಡಲು ಪರವಾನಗಿ ಇಲ್ಲ. ಆದಾಗ್ಯೂ ಅನೇಕ ಕಡೆ ರಾಜಾರೋಷವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ನಮಸ್ಕಾರ ಶ್ರೀ ರೆಸ್ಟೋರೆಂಟ್ ಸೇರಿದಂತೆ ಅನೇಕ ಡಾಬಾ, ರೆಸ್ಟೋರೆಂಟ್ ಮತ್ತು ಸಾವಜಿ ಹೋಟೆಲ್ಗಳ ಮೇಲೆ ಕೇಸ್ ದಾಖಲಿಸಿ, ದಂಡ ವಿಧಿಸಲಾಗಿದೆ. ಪುನಃ ಮದ್ಯ ಮಾರಾಟ ಮಾಡಿದಲ್ಲಿ ಕಾನೂನು ಕ್ರಮ ಜರುಗಿಸಿ, ಬಂದ್ ಮಾಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ’ ಎಂದರು.</p>.<p>‘ಪ್ರಸ್ತುತ ಅಬಕಾರಿ ಕಚೇರಿಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್–2, ಹೆಡ್ ಕಾನ್ ಸ್ಟೆಬಲ್–2, ಕ್ಲರ್ಕ್–2, ಒಬ್ಬ ಚಾಲಕ ಸೇರಿ 7 ಜನ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಇನ್ನೂ 5 ಜನ ಕಾನ್ಸ್ಟೆಬಲ್ ಬೇಕು. ಈ ಬಗ್ಗೆ ಸರ್ಕಾರ ಕ್ರಮವಹಿಸಿ ಹುದ್ದೆಗಳ ಭರ್ತಿಗೆ ಮುಂದಾಗಬೇಕು. ಅಗತ್ಯ ಸಿಬ್ಬಂದಿಗಳಿದ್ದರೆ, ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಲು ಸಾಧ್ಯ’ ಎಂದು ಗಂಗಾಧರ ಬಿ.ಬಡಿಗೇರ ಅಭಿಪ್ರಾಯಪಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-32-1685630890</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>