<p><strong>ಸಿಂಧನೂರು:</strong> ತಾಲ್ಲೂಕಿನ ಹತ್ತಿಗುಡ್ಡ ಗ್ರಾಮದಲ್ಲಿ ಬಿಲ್ವಪತ್ರೆ ಬಸವೇಶ್ವರ ಜಾತ್ರಾ ಮಹೋತ್ಸವವು ಸೋಮವಾರ ಸಂಜೆ ವಿಜೃಂಭಣೆಯಿಂದ ಜರುಗಿತು.</p><p><br>ಬೆಳಗಿನಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರಗಳು ನೆರವೇರಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಮಹಿಳೆಯರು ಹಾಗೂ ಯುವಕರು ಭಕ್ತಿ ಗೀತೆಗಳೊಂದಿಗೆ ಜಾತ್ರೆಯ ಸಂಭ್ರಮವನ್ನು ಹೆಚ್ಚಿಸಿದರು.</p><p><br> ಜಾತ್ರಾ ಅಂಗವಾಗಿ ಮೆರವಣಿಗೆ, ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಭಾಗವಹಿಸಿದ್ದರು. ಜಾತ್ರಾ ಮಹೋತ್ಸವದಲ್ಲಿ ತುರ್ವಿಹಾಳ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.</p>
<p><strong>ಸಿಂಧನೂರು:</strong> ತಾಲ್ಲೂಕಿನ ಹತ್ತಿಗುಡ್ಡ ಗ್ರಾಮದಲ್ಲಿ ಬಿಲ್ವಪತ್ರೆ ಬಸವೇಶ್ವರ ಜಾತ್ರಾ ಮಹೋತ್ಸವವು ಸೋಮವಾರ ಸಂಜೆ ವಿಜೃಂಭಣೆಯಿಂದ ಜರುಗಿತು.</p><p><br>ಬೆಳಗಿನಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರಗಳು ನೆರವೇರಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಮಹಿಳೆಯರು ಹಾಗೂ ಯುವಕರು ಭಕ್ತಿ ಗೀತೆಗಳೊಂದಿಗೆ ಜಾತ್ರೆಯ ಸಂಭ್ರಮವನ್ನು ಹೆಚ್ಚಿಸಿದರು.</p><p><br> ಜಾತ್ರಾ ಅಂಗವಾಗಿ ಮೆರವಣಿಗೆ, ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಭಾಗವಹಿಸಿದ್ದರು. ಜಾತ್ರಾ ಮಹೋತ್ಸವದಲ್ಲಿ ತುರ್ವಿಹಾಳ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.</p>