<p><strong>ಸಿಂಧನೂರು</strong>: ನಗರದ ಎಪಿಎಂಸಿಯಲ್ಲಿ ವಿರೂಪಾಪುರ ಮತ್ತು ನಟರಾಜ ಕಾಲೊನಿಯ ಕೆಲ ಯುವಕರ ನಡುವೆ ಇಸ್ಪೀಟ್ ಜೂಜಾಟದಲ್ಲಿ ನಡೆದ ವಿವಾದ ವಿಕೋಪಕ್ಕೆ ತಿರುಗಿ ಗುಂಪು ಘರ್ಷಣೆಯಾಗಿ ಮಾರ್ಪಟ್ಟಿದೆ.</p>.<p>ಘಟನೆಯಲ್ಲಿ ಪಿ.ಮಲ್ಲಿಕಾರ್ಜುನ ಕುರುಕುಂದಿ, ಶಿವರಾಜ ಪಾಟೀಲ ಗುಂಜಳ್ಳಿ, ಪಂಪನಗೌಡ, ರಾಯಪ್ಪ, ಮಂಜುನಾಥ ಎಂಬುವವರ ತಲೆಗೆ ತೀವ್ರ ಪೆಟ್ಟಾಗಿದ್ದು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಜಗಳ ಬಿಡಿಸಲು ಹೋಗಿದ್ದ ಕೆಲವರು ಗಾಯಗೊಂಡಿದ್ದು ಅದರಲ್ಲಿ ಮಲ್ಲಿಕಾರ್ಜುನ ಒಬ್ಬರಾಗಿದ್ದಾರೆ ಎಂದು ತಿಳಿದು ಬಂದಿದೆ.</p>.<p>ಒಂದು ಗುಂಪಿನ ನಾಯಕತ್ವವನ್ನು ಶಿವರಾಜ ಪಾಟೀಲ ಗುಂಜಳ್ಳಿ ವಹಿಸಿಕೊಂಡಿದ್ದು, ತಮ್ಮ ಸಹೋದರನ ಪುತ್ರನಿಗೆ ಹಲ್ಲೆ ಮಾಡಿದ್ದಾನೆ ಎಂದು ನಗರಸಭೆ ಸದಸ್ಯ ಪಿ.ಸಣ್ಣವೀರಭದ್ರಪ್ಪ ಕುರುಕುಂದಿ ಅವರು ಸ್ಥಳಕ್ಕೆ ತೆರಳಿದ್ದರಿಂದ ಶಿವರಾಜ ಪಾಟೀಲ ಮತ್ತು ಸಣ್ಣವೀರಭದ್ರಪ್ಪ ಅವರ ನಡುವೆಯೂ ಮಾರಾಮಾರಿ ನಡೆದಿದೆ ಎಂದು ಹೇಳಲಾಗಿದೆ.</p>.<p>ಘಟನೆಯನ್ನು ತಿಳಿಗೊಳಿಸಲು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ ಪ್ರಯತ್ನಿಸುತ್ತಿದ್ದಾರೆ.</p>.<p>‘ಇಲ್ಲಿಯ ವರೆಗೆ ಪೊಲೀಸ್ ಠಾಣೆಗೆ ಯಾವುದೇ ದೂರು ಬಂದಿರುವುದಿಲ್ಲ. ಆದರೂ ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಸ್ವಯಂ ಸ್ಪೂರ್ತಿಯಿಂದ ಪ್ರಕರಣ ದಾಖಲಿಸಿಕೊಳ್ಳಲಾಗುವುದು’ ಎಂದು ಪೊಲೀಸ್ ಇನ್ಸ್ಪೆಕ್ಟರ್ ವೀರಾರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು</strong>: ನಗರದ ಎಪಿಎಂಸಿಯಲ್ಲಿ ವಿರೂಪಾಪುರ ಮತ್ತು ನಟರಾಜ ಕಾಲೊನಿಯ ಕೆಲ ಯುವಕರ ನಡುವೆ ಇಸ್ಪೀಟ್ ಜೂಜಾಟದಲ್ಲಿ ನಡೆದ ವಿವಾದ ವಿಕೋಪಕ್ಕೆ ತಿರುಗಿ ಗುಂಪು ಘರ್ಷಣೆಯಾಗಿ ಮಾರ್ಪಟ್ಟಿದೆ.</p>.<p>ಘಟನೆಯಲ್ಲಿ ಪಿ.ಮಲ್ಲಿಕಾರ್ಜುನ ಕುರುಕುಂದಿ, ಶಿವರಾಜ ಪಾಟೀಲ ಗುಂಜಳ್ಳಿ, ಪಂಪನಗೌಡ, ರಾಯಪ್ಪ, ಮಂಜುನಾಥ ಎಂಬುವವರ ತಲೆಗೆ ತೀವ್ರ ಪೆಟ್ಟಾಗಿದ್ದು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಜಗಳ ಬಿಡಿಸಲು ಹೋಗಿದ್ದ ಕೆಲವರು ಗಾಯಗೊಂಡಿದ್ದು ಅದರಲ್ಲಿ ಮಲ್ಲಿಕಾರ್ಜುನ ಒಬ್ಬರಾಗಿದ್ದಾರೆ ಎಂದು ತಿಳಿದು ಬಂದಿದೆ.</p>.<p>ಒಂದು ಗುಂಪಿನ ನಾಯಕತ್ವವನ್ನು ಶಿವರಾಜ ಪಾಟೀಲ ಗುಂಜಳ್ಳಿ ವಹಿಸಿಕೊಂಡಿದ್ದು, ತಮ್ಮ ಸಹೋದರನ ಪುತ್ರನಿಗೆ ಹಲ್ಲೆ ಮಾಡಿದ್ದಾನೆ ಎಂದು ನಗರಸಭೆ ಸದಸ್ಯ ಪಿ.ಸಣ್ಣವೀರಭದ್ರಪ್ಪ ಕುರುಕುಂದಿ ಅವರು ಸ್ಥಳಕ್ಕೆ ತೆರಳಿದ್ದರಿಂದ ಶಿವರಾಜ ಪಾಟೀಲ ಮತ್ತು ಸಣ್ಣವೀರಭದ್ರಪ್ಪ ಅವರ ನಡುವೆಯೂ ಮಾರಾಮಾರಿ ನಡೆದಿದೆ ಎಂದು ಹೇಳಲಾಗಿದೆ.</p>.<p>ಘಟನೆಯನ್ನು ತಿಳಿಗೊಳಿಸಲು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ ಪ್ರಯತ್ನಿಸುತ್ತಿದ್ದಾರೆ.</p>.<p>‘ಇಲ್ಲಿಯ ವರೆಗೆ ಪೊಲೀಸ್ ಠಾಣೆಗೆ ಯಾವುದೇ ದೂರು ಬಂದಿರುವುದಿಲ್ಲ. ಆದರೂ ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಸ್ವಯಂ ಸ್ಪೂರ್ತಿಯಿಂದ ಪ್ರಕರಣ ದಾಖಲಿಸಿಕೊಳ್ಳಲಾಗುವುದು’ ಎಂದು ಪೊಲೀಸ್ ಇನ್ಸ್ಪೆಕ್ಟರ್ ವೀರಾರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>